ಬಿಗ್‍ಬಾಸ್ ಸ್ಪರ್ಧಿ ಜಯಶ್ರೀ ನೇಣು ಬಿಗಿದುಕೊಂಡು ಆತ್ಮಹತ್ಯೆ

Team Newsnap
1 Min Read

ಬಿಗ್‍ಬಾಸ್ ಸ್ಪರ್ಧಿ ಜಯಶ್ರೀ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಹಿಂದೆಯೂ ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

ಈ ಹಿಂದೆ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದ ಜಯಶ್ರೀ, ‘ಖಿನ್ನತೆಗೆ ಹಾಗೂ ಈ ಜಗತ್ತಿಗೆ ವಿದಾಯ ಹೇಳುತ್ತಿದ್ದೇನೆ” ಎಂದು ಪೋಸ್ಟ್ ಮಾಡಿದ್ದರು.

ಘಟನೆ ವಿವರ :

ಬೆಂಗಳೂರಿನಲ್ಲಿರುವ ಕಡಬಗೆರೆ ಕ್ರಾಸ್ ಜನಪ್ರಿಯ ಬಳಿಯ ಪ್ರಗತಿ ಲೇಔಟ್​​ನ ಮನೆಯಲ್ಲಿ ತಡರಾತ್ರಿ ಜಯಶ್ರೀ ರಾಮಯ್ಯ ನೇಣಿಗೆ ಶರಣಾಗಿದ್ದಾರೆ.

ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯ ಪ್ರಗತಿ ಲೇಔಟ್​​ನಲ್ಲಿ ಘಟನೆ ನಡೆದಿದೆ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

0a010a4a c6fb 4eaf a3c1 e9d1f928a720

ದಯಾ ಮರಣ ಕೇಳಿದ್ದಳು…..:

ಈ ಹಿಂದೆ ಫೇಸ್​ಬುಕ್​ ಪೋಸ್ಟ್​ ನಲ್ಲಿಯೂ ನಟಿ ಜಯಶ್ರೀ ರಾಮಯ್ಯ ತಮಗೆ ದಯಾಮರಣ ಕೊಡಿ ಅಂತಾ ಹಾಕಿಕೊಂಡಿದ್ದರು. ಆ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಪ್ರಯತ್ನಿಸಿದ್ದರು.

ಆ ವೇಳೆಯೇ ಜಯಶ್ರೀ ರಾಮಯ್ಯ ಎಷ್ಟರ ಮಟ್ಟಿಗೆ ಅವರು ಖಿನ್ನತೆಗೆ ಒಳಗಾಗಿದ್ದಾರೆ ಅನ್ನೋದು ಭಾರೀ ಚರ್ಚೆಗೆ ಕಾರಣವಾಗಿತ್ತು.

ತಮ್ಮ ಫೇಸ್​​ಬುಕ್​​ನಲ್ಲಿ ಐ ಕ್ವಿಟ್, ನಾನು ಸಾಯ್ತಿನಿ ಅಂತ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಗೂ ವಿಡಿಯೋಗಳನ್ನೂ ಜಯಶ್ರೀ ಅವರು ಹಾಕಿಕೊಂಡಿದ್ದರು.

ನನಗೆ ದಯಾ ಮರಣ ಕೊಡಿ ಅಂತ ಫೇಸ್​ಬುಕ್​ ಲೈವ್​ನಲ್ಲಿ ಮಾತನಾಡಿದ್ದರು. 55 ಸೆಕೆಂಡ್​ಗಳ ಕಾಲ ಮಾತನಾಡಿದ್ದ ಅವರು, ನಂಗೆ ಸಾಯಲು ಬಿಡಿ ಅಂತ ಅಳಲು ತೋಡಿಕೊಂಡಿ ದ್ದರು. ಅಲ್ಲದೇ ಪಬ್ಲಿಸಿಟಿಗೋಸ್ಕರ ನಾನು ಈ ರೀತಿ ಮಾಡ್ತಿಲ್ಲ. ನನಗೆ ಯಾವುದೇ ಆರ್ಥಿಕ ನಿರೀಕ್ಷೆ ಅಥವಾ ತೊಂದರೆ ಇಲ್ಲ. ನನಗೆ ಬೇಕಾಗಿರೋದು ಸಾವು. ನಾನು ತುಂಬಾ ಡಿಪ್ರೆಷನ್​ನಲ್ಲಿದ್ದೀನಿ. ಫ್ಯಾಮಿಲಿ ಸಮಸ್ಯೆಯಿಂದ ನೊಂದಿದ್ದೀನಿ. ನನ್ನ ಜೀವನದಲ್ಲಿ ನಡೆಯಬಾರದ ಘಟನೆ ನಡೆದು ಹೋಗಿದೆ. ನನ್ನಿಂದ ಅದನ್ನು ಮರೆಯೋದಕ್ಕೆ ಆಗ್ತಿಲ್ಲ. ನಾನು ಲೂಸರ್, ನಾನು ಹುಚ್ಚಿ. ದಯವಿಟ್ಟು ಮರ್ಸಿ ಕಿಲ್ಲಿಂಗ್​ಗೆ ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದರು.

Share This Article
Leave a comment