ರಾಜ್ಯದ ಮಸ್ಕಿ, ಸಿಂದಗಿ ಹಾಗೂ ಬಸವ ಕಲ್ಯಾಣ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಭಾನುವಾರ ನಡೆದ ಜೆಡಿಎಸ್ ಸಮಾವೇಶದಲ್ಲಿ ಪ್ರಕಟಿಸಿದರು.
ಇತ್ತೀಚೆಗೆ ರಾಯಚೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಉಪ ಚುನಾವಣೆ ಎದುರಿಸಲು ನಮ್ಮ ಬಳಿ ಹಣ ಇಲ್ಲ. ಹಾಗಾಗಿ ಬೆಳಗಾವಿ ಲೋಕಸಭಾ, ಮಸ್ಕಿ, ಸಿಂದಗಿ ಹಾಗೂ ಬಸವ ಕಲ್ಯಾಣ ಕ್ಷೇತ್ರಗಳ ಬೈ ಎಲೆಕ್ಷನ್ಗೆ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕಲ್ಲ ಎಂದಿದ್ದರು.
ದೇವೇಗೌಡರು ಈ ಹೇಳಿಕೆ ಕೊಟ್ಟು ನಾಲ್ಕು ದಿನ ನಂತರ ಇದೀಗ ಮಸ್ಕಿ, ಸಿಂದಗಿ ಹಾಗೂ ಬಸವ ಕಲ್ಯಾಣ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್ ಪಕ್ಷ ಸಂಘಟನೆ ಸಮಾವೇಶ ಮತ್ತು ಗ್ರಾಪಂ ನೂತನ ಸದಸ್ಯರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ದೇವೇಗೌಡರು ಆರ್ಥಿಕ ಪರಿಸ್ಥಿತಿಯ ಕಾರಣದಿಂದ ಸಿಂದಗಿ, ಬಸವ ಕಲ್ಯಾಣ, ಮಸ್ಕಿ ಕ್ಷೇತ್ರಗಳ ಬೈ ಎಲೆಕ್ಷನ್ಗೆ ಜೆಡಿಎಸ್ನಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲ್ಲ ಎಂದಿದ್ದರು.
ಆದರೆ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಈ ಮೂರು ಕ್ಷೇತ್ರದಲ್ಲೂ ಅಭ್ಯರ್ಥಿಗಳನ್ನು ಹಾಕ್ತೇವೆ. ಈ ಕುರಿತು ದೇವೇಗೌಡರ ಅನುಮತಿ ಪಡೆದುಕೊಂಡೇ ಮುಂದುವರಿಯ ಲಾಗುತ್ತಿದೆ ಎಂದರು.
ಜೆಡಿಎಸ್ ಬಿಟ್ಟು ಹೋದವರಿಗೆ ನಮ್ಮ ಪಕ್ಷದ ಬಗ್ಗೆ ಚಿಂತೆ ಏಕೆ? ಬೈ ಎಲೆಕ್ಷನ್ಗೆ ಅಭ್ಯರ್ಥಿಯನ್ನು ಕಣಕ್ಕಿಳಿಸೋದಿಲ್ಲ ಎಂದು ದೇವೇಗೌಡರು ಹೇಳಿದ್ರೆ ಅವರು ಏಕೆ ತಲೆಕೆಡಿಸಿಕೊಳ್ಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಚ್ಡಿಕೆ ಕಿಡಿಕಾರಿದರು.
ದೇವೇಗೌಡರು ಸಾಲ ಮಾಡಿ ಜೆಡಿಎಸ್ ಕಟ್ಟಿದ್ದಾರೆ. ಅವರ ಮಾರ್ಗದರ್ಶನವನ್ನು ನಾವು ಮುಂದುವರಿಸುತ್ತಲೇ ಪಕ್ಷ ಕಟ್ಟುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment