ಪಕ್ಷದಿಂದ ಬೆಳೆದವರೆ ನಮ್ಮ ಪಕ್ಷ ಮುಗಿಸಲು ಹೊರಟಿದ್ದಾರೆ. ಮಾಜಿ ಸಚಿವ ಜಿ.ಟಿ.ದೇವೇಗೌಡರಿಗೆ ಜೆಡಿಎಸ್ ಬಾಗಿಲು ಕ್ಲೋಸ್ ಅಗಿದೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಜಿಟಿಡಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಹಾಲು ಒಕ್ಕೂಟ ಚುನಾವಣೆ ಹಿನ್ನೆಲೆ ಮೈಸೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ ನನಗೆ ಸಹಕಾರ ಕ್ಷೇತ್ರದ ಎಬಿಸಿಡಿಯೂ ಗೊತ್ತಿಲ್ಲ, ಆದರೂ ಕಾರ್ಯಕರ್ತರಿಗೆ ಶಕ್ತಿ ತುಂಬಲು ಸ್ಪರ್ಧೆಗೆ ಇಳಿದಿದ್ದೇವೆ. ನಮ್ಮ ಪಕ್ಷದಿಂದ ಬೆಳೆದವರೆ ನಮ್ಮ ಪಕ್ಷ ಮುಗಿಸಲು ಹೊರಟಿದ್ದಾರೆ. ದುರಹಂಕಾರದಲ್ಲಿ ಮಾತಾಡುತ್ತಿದ್ದಾರೆ. ಅಧಿಕಾರ ಎನ್ನುವುದು ಯಾರಿಗೂ ಶಾಶ್ವತವಲ್ಲ ಎಂದು ಹೇಳಿದ್ದಾರೆ.
ಜಿಟಿಡಿ ಬಗ್ಗೆ ಹೆಚ್.ಡಿ.ದೇವೇಗೌಡರಿಗೆ ಸ್ವಲ್ಪ ಸಾಫ್ಟ್ ಕಾರ್ನರ್ ಇತ್ತು. ಈಗ ಅವರಿಗೂ ಇರುವ ಸತ್ಯ ಹೇಳಿ ಅವರನ್ನು ಒಪ್ಪಿಸುತ್ತೇನೆ. ಇಂಥವರ ಸಹವಾಸ ಬಿಡಬೇಕು. ಇಲ್ಲದೆ ಇದ್ದರೆ ವಿಷ ಆಗಿ ಪಕ್ಷ ಹಾಳು ಮಾಡುತ್ತಾರೆ ಎಂದು ಹೇಳಿ ಒಪ್ಪಿಸುವೆ. ನಾನು ಈ ಪಕ್ಷದಲ್ಲಿ ಸಕ್ರಿಯಾನಾಗಿ ಕೆಲಸ ಮಾಡುವ ದಿನದವರೆಗೂ ಜಿಟಿಡಿಯನ್ನು ಜೆಡಿಎಸ್ ಗೆ ಮತ್ತೆ ಸೇರಿಸುವ ಪ್ರಶ್ನೆ ಇಲ್ಲ ಎಂದು ಹೇಳಿದ್ದಾರೆ.
ನಾನು ಯಾರನ್ನು ಪಕ್ಷದಿಂದ ಕಳುಹಿಸಿಲ್ಲ. ಅವರದ್ದೇ ಆಗಿರುವ ನಿರ್ಧಾರವನ್ನು ತೆಗೆದುಕೊಂಡು ಹೋಗಿದ್ದಾರೆ. ಸಣ್ಣ ಕಾರ್ಯಕರ್ತರೆ ನಮ್ಮ ಪಕ್ಷಕ್ಕೆ ಸಾಕು. ದೊಡ್ಡದಾಗಿ ಬೆಳೆದು ನಿಂತಿರುವರು ನಮ್ಮ ಪಕ್ಷಕ್ಕೆ ಬೇಡ. ಈ ಹಿಂದೆ ಹೋದವರನ್ನು ಮರಳಿ ಪಕ್ಷಕ್ಕೆ ಕರೆದುಕೊಂಡು ಅನುಭವಿಸಿದ್ದೇವೆ ಇದೇ ಫೈನಲ್ ನಿರ್ಧಾರವಾಗಿದೆ. ನನ್ನ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಬೇಕು ಅಷ್ಟೇ ಎಂದಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment