January 30, 2026

Newsnap Kannada

The World at your finger tips!

election , politics , JDS

ಘೋಷಿತ ಯೋಜನೆ ಅನುಷ್ಠಾನ ಜಾರಿ ಮಾಡದಿದ್ದರೆ JDS ಬಾಗಿಲು ಬಂದ್​​ – ಕುಮಾರಸ್ವಾಮಿ

Spread the love

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಘೋಷಿಸುವ ಯೋಜನೆಗಳನ್ನು ಅನುಷ್ಠಾನಕ್ಕೆ ತರದೆ ಇದ್ದರೆ ಜೆಡಿಎಸ್‌ ಪಕ್ಷವನ್ನು ಮುಚ್ಚುತ್ತೇನೆ ಎಂದು ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಜೆಡಿಎಸ್ ಅಭ್ಯರ್ಥಿ ಮಂಜೇಗೌಡ ಪರ ಮತಯಾಚನೆಯಲ್ಲಿ ತೊಡಗಿರುವ ಮಾಜಿ ಸಿಎಂ ಕುಮಾರಸ್ವಾಮಿ ಪಂಚರತ್ನ ಯೋಜನೆಗಳ ಮೂಲಕ‌ ಮುಂಬರುವ ಚುನಾವಣೆ ಎದುರಿಸುತ್ತೇವೆ.2023 ಜೆಡಿಎಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿ. ಮುಂದಿನ ಎಲೆಕ್ಷನ್​ನಲ್ಲಿ ನಾವು  ಈ ಪಂಚರತ್ನ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಘೋಷಿಸಿ ಅವುಗಳನ್ನು ಕಾರ್ಯರೂಪಕ್ಕೆ ತರದೇ ಇದ್ದರೆ  ಜೆಡಿಎಸ್ ಪಕ್ಷ ಮುಚ್ಚುತ್ತೇನೆ ಎಂದಿದ್ದಾರೆ.

ರೈತರು ಮಹಿಳೆಯರು ಬಡವರಿಗೆ ಅನೇಕ ಯೋಜನೆಗಳನ್ನು ಹಾಕಿದ್ದೇನೆ. ಪಂಚರತ್ನ ಯೋಜನೆಯ ಮೂಲಕ ಕರ್ನಾಟಕ ಅಭಿವೃದ್ಧಿಗೆ ಪೂರ್ವ ತಯಾರಿ ನಡೆಸಿದ್ದೇನೆ ಹೀಗಾಗಿ ನೀವೆಲ್ಲರೂ ನನಗೆ ಬಹುಮತ ನೀಡಿ ಗೆಲ್ಲಿಸಬೇಕೆಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ

error: Content is protected !!