January 28, 2026

Newsnap Kannada

The World at your finger tips!

politics,karnataka,election

ಜೆಡಿಎಸ್ ಇಬ್ರಾಹಿಂ ಅಮಾನತು

Spread the love
  • ಪಕ್ಷ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ ಎಂಬ ಆರೋಪ
  • ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ‌.ದೇವೇಗೌಡರಿಂದ ಆದೇಶ
  • ತಕ್ಷಣದಿಂದಲೇ ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಮಾನತು


ಬೆಂಗಳೂರು : ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ಸಿ.ಎಂ ಇಬ್ರಾಹಿಂ ಅವರ ವಿರುದ್ಧ ಕಠಿಣ ನಿರ್ಧಾರ ತೆಗೆದುಕೊಂಡು ಅವರನ್ನು ತಕ್ಷಣದಿಂದ ಜಾರಿಯಾಗುವಂತೆ ಜೆಡಿಎಸ್ ಪಕ್ಷದಿಂದಲೇ ಅಮಾನತು ಮಾಡಿದ್ದಾರೆ .

ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆಯನ್ನು ವಿರೋಧಿಸಿದ್ದ ಸಿ.ಎಂ ಇಬ್ರಾಹಿಂ ಅವರು ಒರಿಜಿನಲ್ ಜೆಡಿಎಸ್ ಪಕ್ಷ ನಮ್ಮದೇ. ನಿಜವಾದ ಜಾತ್ಯಾತೀತ ಜನತಾ ದಳವನ್ನು ಕಟ್ಟುತ್ತೇನೆ ಎಂದು ಗುಡುಗಿದ್ದರು.

ಅಲ್ಲದೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರನ್ನೇ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲು ಚಿಂತಿಸುವುದಾಗಿಯೂ ಮಾತುಗಳನ್ನಾಡಿದ್ದರಿಂದ ಸಿ.ಎಂ ಇಬ್ರಾಹಿಂ ನಡೆಗೆ ಹೆಚ್.ಡಿ ದೇವೇಗೌಡರೇ ಬ್ರೇಕ್ ಹಾಕಿದ್ದಾರೆ.

ಕಳೆದ ನವೆಂಬರ್ 15ರಂದು ಕೇರಳದ ತಿರುವನಂತಪುರಂ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಭಾಗಿಯಾಗಿದ್ದರು. ಬೆಸ್ಕಾಂಗೆ 68,526 ರೂ ದಂಡ ಕಟ್ಟಿದ್ದೇನೆ – HDK

ಪಕ್ಷದ ವಿರೋಧಿ ಹೇಳಿಕೆಯನ್ನು ಸಿ.ಎಂ ಇಬ್ರಾಹಿಂ ನೀಡಿದ್ದಾರೆ ಎಂಬ ಕಾರಣದಿಂದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ‌.ದೇವೇಗೌಡರು ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ .

error: Content is protected !!