ಜೆಡಿಎಸ್ ಬಗ್ಗೆ ಸಿಎಂ ಇಬ್ರಾಹಿಂ ಅವರಿಗೆ ಪ್ರೀತಿ ವಿಶ್ವಾಸ ಇದೆ. ಅವರು ಜೆಡಿಎಸ್ಗೆ ಬಂದರೆ ಉತ್ತಮ ಸ್ಥಾನ ನೀಡುತ್ತೇವೆ
ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿ ಸಿಎಂ ಇಬ್ರಾಹಿಂ ಜೊತೆ ಮಾತಾಡಿದ್ದೇನೆ. ಈ ಹಿಂದೆ ನಮ್ಮ ಪಕ್ಷದಲ್ಲಿ ಇದ್ದರು. ದೇವೇಗೌಡರ ಕಷ್ಟ ಸುಖದಲ್ಲಿ ಭಾಗಿಯಾಗಿದ್ದರು.
ನಾನು 3-4 ಬಾರಿ ಭೇಟಿ ಆಗಿದ್ದೆ. ಕಾಂಗ್ರೆಸ್ನಲ್ಲಿ ವಿಪಕ್ಷ ಸ್ಥಾನದ ಸಿಕ್ಕರೆ ಅಲ್ಲೆ ಇರಿ ಎಂದು ಹೇಳಿದ್ದೆ ಎಂಬುದನ್ನು ನೆನಪಿಸಿಕೊಂಡರು.
ಈ ಬಗ್ಗೆ ಅನೇಕ ಬಾರಿ ಇಬ್ರಾಹಿಂ ಜೊತೆ ಮಾತಾಡಿದ್ದೇವೆ. ಅವರು ಜೆಡಿಎಸ್ಗೆ ಬಂದ್ರೆ ಸ್ವಾಗತ. ಈ ಬಗ್ಗೆ ಅವರು ನಿರ್ಧಾರ ಮಾಡಲಿ ಎಂದು ಜೆಡಿಎಸ್ಗೆ ಆಹ್ವಾನ ನೀಡಿದರು.
ಜನತಾ ಪರಿವಾರ ಮತ್ತೆ ಒಗ್ಗೂಡಿಸಲು ಸಾಧ್ಯವಿಲ್ಲ. ಈಗ ಎಲ್ಲರೂ ಬೇರೆ ಬೇರೆ ಕಡೆ ಹೋಗಿದ್ದಾರೆ. ಹೊಸ ನಾಯಕತ್ವ ಬೆಳೆಸುವ ಶಕ್ತಿ ಕಾರ್ಯಕರ್ತರಲ್ಲಿ ಇದೆ. ಹೊಸ ನಾಯಕತ್ವ ಬೆಳೆಸುವ ನಿಟ್ಟಿನಲ್ಲಿ ನಾನು ಕೆಲಸ ಮಾಡುವೆ ಎಂದರು.
ಜೆಡಿಎಸ್ ಅಂತಂತ್ರ ಆದಾಗ ಸ್ವತಂತ್ರ ವಾಗುತ್ತಾರೆ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ನಾವು ಯಾವತ್ತೂ ಅತಂತ್ರರಾಗಿಲ್ಲ. ಅವರು ಅಂತಂತ್ರರಾದಾಗ ಜೆಡಿಎಸ್ ಬಾಗಿಲು ಬಡಿದಿದ್ದಾರೆ. ಗೊಂದಲ ಸೃಷ್ಟಿ ಮಾಡುವುದಕ್ಕೆ ನಾವು ಅವಕಾಶ ಕೊಟ್ಟಿಲ್ಲ ಎಂದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ