ಹೆಚ್.ಡಿ ದೇವೇಗೌಡರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಲ್ಲ. ಜೆಡಿಎಸ್ ಒಂದು ಪೊಲಿಟಿಕಲ್ ಪಾರ್ಟಿನೇ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಿದ್ದು, ನಾಳೆಯ ಕೇಂದ್ರ ಬಜೆಟ್ ಬಗ್ಗೆ ಯಾವ ನಿರೀಕ್ಷೆಯನ್ನೂ ಇಟ್ಟುಕೊಂಡಿಲ್ಲ. ಕೇಂದ್ರದವರು ಆರ್ಥಿಕ ಸರ್ವೇ ಬಗ್ಗೆ ಸುಳ್ಳು ಹೇಳ್ತಾರೆ. ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಜಿಡಿಪಿ ಪಾತಾಳಕ್ಕೆ ಕುಸಿದಿದೆ ಎಂದರು.
ಕೊರೋನಾ ಕಾರಣದಿಂದ ಜಿಡಿಪಿ ಬೆಳವಣಿಗೆ 4.2 ಇತ್ತು. ಸದ್ಯ -7.7 ಇದೆ. ಜಿಡಿಪಿ ಬೆಳವಣಿಗೆ ನಕರಾತ್ಮಕವಾಗಿದೆ ಎಂದು ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.
ದೇಶದ ಜನತೆಗೆ ಕೇಂದ್ರ ಸರ್ಕಾರ ಜಿಡಿಪಿ ಬೆಳವಣಿಗೆ ಬಗ್ಗೆ ತಪ್ಪು ಮಾಹಿತಿ ನೀಡುತ್ತಾರೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆಯಂತೂ ತಾಂಡವವಾಡ್ತಿದೆ. ನಗರ ಪ್ರದೇಶದಲ್ಲಿ ಶೇ 9.2 ನಿರೋದ್ಯೋಗ ಸಮಸ್ಯೆ ಇದ್ರೆ, ಗ್ರಾಮೀಣ ಪ್ರದೇಶದಲ್ಲಿ ಶೇ 8.9 ಇದೆ. ದೇಶ ಅಭಿವೃದ್ಧಿ ಮಾಡೋಕೆ ಇವರ ಬಳಿ ದುಡ್ಡು ಎಲ್ಲಿದೆ ಎಂದು ವಾಗ್ದಾಳಿ ಮಾಡಿದರು
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು