ಯೋಗೇಶ್ವರ್ ಹುಟ್ಟೂರು ಚಕ್ಕರೆಯಲ್ಲಿಯೇ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿ ಪಂಚಾಯತಿ ಅಧಿಕಾರ ಸೂತ್ರ ಹಿಡಿಯುವ ಮೂಲಕ ಸಚಿವ ಸಿ.ಪಿ.ಯೋಗೇಶ್ವರ್ಗೆ ಭಾರೀ ಮುಖಭಂಗವಾಗಿದೆ.
ಗ್ರಾಮಪಂಚಾಯಿತಿ ಚುನಾವಣೆಯ ಮತದಾನದ ದಿನದಂದು ಸಿ.ಪಿ. ಯೋಗೇಶ್ವರ್ ಸ್ವಗ್ರಾಮ ಚಕ್ಕೆರೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿ ನಾವು 25 ಕ್ಕೂ ಹೆಚ್ಚು ಪಂಚಾಯಿತಿಗಳಲ್ಲಿ ಅಧಿಕಾರ ಹಿಡಿಯುತ್ತೇವೆ. ಕುಮಾರಸ್ವಾಮಿಯವರ ಕಾರ್ಯವೈಖರಿ, ಕ್ಷೇತ್ರದ ಜನರ ಬಗ್ಗೆ ಇರುವ ಕಾಳಜಿ ಈಗ ಗೊತ್ತಾಗಲಿದೆ ಎಂದು ಭವಿಷ್ಯ ನುಡಿದಿದ್ದರು.
ಆದರ ಚಕ್ಕೆರೆ ಗ್ರಾಮದಲ್ಲಿಯೇ ಯೋಗೇಶ್ವರ್ ಸೋಲುಂಡಿದ್ದಾರೆ. ಚಕ್ಕೆರೆ ಗ್ರಾಮದಲ್ಲಿ 7 ಸ್ಥಾನಗಳ ಪೈಕಿ 5 ರಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದರೆ, ಬಿಜೆಪಿ ಬೆಂಬಲಿತರು 2 ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
ಇನ್ನು ಚಕ್ಕೆರೆ ಗ್ರಾಮಪಂಚಾಯಿತಿಯಲ್ಲಿ ಒಟ್ಟು 14 ಸ್ಥಾನಗಳ ಪೈಕಿ ಜೆಡಿಎಸ್ 12 ಕಡೆಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಕೇವಲ 2 ಸ್ಥಾನಪಡೆದು ಹೀನಾಯವಾಗಿ ಸೋತಿದೆ.
ಚನ್ನಪಟ್ಟಣ ಕ್ಷೇತ್ರದ ಹಾಲಿ ಶಾಸಕ ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಅಲೆಯ ಎದುರು ಸಿ.ಪಿ.ಯೋಗೇಶ್ವರ್ಗೆ ಕ್ಷೇತ್ರದ ಜನರು ಅಷ್ಟಾಗಿ ಒಲವು ತೋರಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ. ಗ್ರಾಮಪಂಚಾಯಿತಿ ಚುನಾವಣೆಗಳು ಪಕ್ಷದ ಚಿಹ್ನೆಯಡಿಯಲ್ಲಿ ನಡೆಯುವುದಿಲ್ಲ ಎಂದಾದರೂ ಸಹ ಪಕ್ಷ ಹಾಗೂ ನಾಯಕರ ಹೆಸರು ಅಲ್ಲಲ್ಲಿ ಕೊಂಚ ಚಾಲ್ತಿಯಲ್ಲಿದ್ದು ಕೆಲಸ ಮಾಡಿದೆ ಎನ್ನುವುದು ಸಹ ವಾಸ್ತವ ಸತ್ಯ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment