Karnataka

ಕಾವೇರಿ ನೀರಿನ ಹಕ್ಕಿನ ಹೋರಾಟಕ್ಕೆ ಜೆಡಿಎಸ್ ಬೆಂಬಲ – ಧರಣಿಗೆ ಸಾಥ್ ನೀಡಿದ ಮಾಜಿ ಸಚಿವರು

ಮಂಡ್ಯ : ಕಾವೇರಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವಂತೆ ಮತ್ತೆ ಆದೇಶ ಮಾಡಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರ ಹಾಗೂ ಕರ್ನಾಟಕದ ಹಿತ ಕಾಯಲು ವಿಫಲವಾಗಿರುವ ಕೇಂದ್ರ – ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ನಿರಂತರ ಧರಣಿಗೆ ಜಾತ್ಯತೀತ ಜನತಾದಳ ಪಕ್ಷದ ಮಾಜಿ ಸಚಿವರುಗಳು ಬೆಂಬಲ ಸೂಚಿಸಿದರು.

ಮಂಡ್ಯ ಸರ್ ಎಂ ವಿ ಪ್ರತಿಮೆ ಎದುರು ನಿರಂತರ ಧರಣಿಯಲ್ಲಿ ಮಾಜಿ ಸಚಿವರಾದ ಸಿ ಎಸ್ ಪುಟ್ಟರಾಜು, ಡಿ.ಸಿ ತಮ್ಮಣ್ಣ ಭಾಗಿಯಾಗಿ ಕಾವೇರಿ ಹೋರಾಟ ಬೆಂಬಲಿಸಿದರು.

ಈ ವೇಳೆ ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ಮಾತನಾಡಿ, ಕಾವೇರಿ ನದಿ ನೀರಿನ ವಿಚಾರವಾಗಿ ಹಲವು ದಿನಗಳಿಂದ ಹೋರಾಟ ನಡೆಯುತ್ತಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಷ್ಟ ಭರವಸೆ ನೀಡಿಲ್ಲ ಇದರಿಂದ ರೈತರು ನ್ಯಾಯ ಸಿಗುವವರೆಗೂ ಹೋರಾಟ ಮಾಡುವುದಾಗಿ ತಿಳಿಸಿದ್ದು, ಇವರ ಹೋರಾಟಕ್ಕೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದರು.

ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಪಕ್ಷದ ವತಿಯಿಂದ ದೊಡ್ಡ ಮಟ್ಟದ ಹೋರಾಟ ಮಾಡಲು ಮುಂದಾಗಿದ್ದೇವೆ, ರೈತರ ಜೊತೆಗೂಡಿ ಸರ್ಕಾರದ ಕಣ್ಣು ತೆರೆಸಲು ಪ್ರತಿಭಟಿಸಲಾಗುವುದೆಂದು ಹೇಳಿದರು.

ಮಾಜಿ ಸಚಿವ ಡಿಸಿ ತಮ್ಮಣ್ಣ ಮಾತನಾಡಿ, ಮುಖ್ಯಮಂತ್ರಿ ರೈತ ಸಮೂಹಕ್ಕೆ ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿಲ್ಲ, ಕೇಂದ್ರ ಸರ್ಕಾರ ಅಥವಾ ಪ್ರಧಾನ ಮಂತ್ರಿ ಬಳಿಗೆ ತೆರಳಿ ಪರಿಹಾರ ದೊರಕಿಸಿ ಕೊಡುವುದಾಗಿ ಖಚಿತ ಸಂದೇಶ ನೋಡಿಲ್ಲ ಎಂದು ಹೇಳಿದರು.ಸರ್ಕಾರಿ ಅಧಿಕಾರಿ ಪ್ರತಿಮಾ ಕೊಲೆ : ತಪ್ಪೊಪ್ಪಿಕೊಂಡ ಕಾರು ಚಾಲಕ ಕಿರಣ್

ಕಾಂಗ್ರೆಸ್ ಸರ್ಕಾರದ ಸಚಿವರು, ಶಾಸಕರು ಕಾವೇರಿ ವಿಚಾರದಲ್ಲಿ ದನಿ ಎತ್ತಿಲ್ಲ ಹಾಗಾಗಿ ಹೋರಾಟಗಾರರು ಅಧಿವೇಶನದಲ್ಲಿ ಚರ್ಚೆ ಆದರೂ ಆಗಲಿ ಎಂದು ಒತ್ತಾಯಿಸಿದರು.

Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024