Trending

ಜೆಡಿಎಸ್ ಯುವ ನಾಯಕ ನಿಖಿಲ್ – ಡಿಕೆಶಿ ಸಮಾಗಮ : ಉಭಯ ಕುಶಲೋಪರಿ ವಿಚಾರಿಸಿದ ನಾಯಕರು

ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಂಡ್ಯದಲ್ಲಿ ಪರಸ್ಪರ ಭೇಟಿಯಾಗಿ, ಪರಸ್ಪರ ಕೈ ಕುಲುಕಿ, ಉಭಯ ಕುಶಲೋಪರಿ ವಿಚಾರಿಸಿದರು.

ನಿಖಿಲ್ ಮತ್ತು ಡಿಕೆಶಿ ಮಂಡ್ಯದ ಬಂದೀಗೌಡ ಬಡಾವಣೆಯಲ್ಲಿ ಮುಖಾಮುಖಿ ಆಗಿದ್ದಾರೆ. ಮಾಜಿ ಸಚಿವ ಕೆ.ವಿ.ಶಂಕರಗೌಡರ ಪತ್ನಿ ನಿಧನ ಹಿನ್ನೆಲೆ ಸಾಂತ್ವನ ಹೇಳಲು ಬಂದಿದ್ದ ವೇಳೆ ಇಬ್ಬರು ಪರಸ್ಪರ ಭೇಟಿಯಾಗಿದ್ದಾರೆ. ಚೆಲುವರಾಯಸ್ವಾಮಿಯನ್ನು ಚೆಲುವಣ್ಣ ಎಂದು ಆತ್ಮೀಯವಾಗಿ ಮಾತನಾಡಿಸಿದ ನಿಖಿಲ್, ಕೆಲ ಕಾಂಗ್ರೆಸ್ಸಿಗರ ಕೈ ಕುಲುಕಿದರು.

ಕೆ.ವಿ.ಶಂಕರಗೌಡರ ಪತ್ನಿ ನಿಧನ ಹಿನ್ನೆಲೆ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಜೆಡಿಎಸ್-ಕಾಂಗ್ರೆಸ್ ನಾಯಕರು ತೆರಳಿದ್ದರು. ಈ ವೇಳೆ ಸಾಂತ್ವನ ಹೇಳಿ ನಿಖಿಲ್ ಕುಮಾರಸ್ವಾಮಿ ವಾಪಸ್ ಆಗುತ್ತಿದ್ದರು ಈ ವೇಳೆ ಸಾಂತ್ವನ ಹೇಳಲು ಕಾಂಗ್ರೆಸ್ ನಾಯಕರೂ ಆಗಮಿಸುತ್ತಿದ್ದರು . ಉಭಯ ನಾಯಕರಾದ ಡಿಕೆಶಿ ಮತ್ತು ನಿಖಿಲ್ ಪರಸ್ಪರ ಕೈ ಕುಲುಕಿದರು. ನಂತರ ನಿಖಿಲ್ ಎದೆ ಮತ್ತು ಭುಜಕ್ಕೆ ಗುದ್ದಿದ ಡಿಕೆಶಿ ಬಳಿಕ ಉಭಯ ಕುಶಲೋಪರಿ ವಿಚಾರಿಸಿಕೊಂಡರು. ಕೆಆರ್ ಪೇಟೆಯ ತ್ರಿವೇಣಿ ಸಂಗಮದ ಮಹಾ ಕುಂಭಮೇಳಕ್ಕೆ ಯುಪಿ ಸಿಎಂ ಯೋಗಿಆದಿತ್ಯನಾಥ

ಸಮಾಗಮನದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ಸಾಹೇಬರು ಒಬ್ಬ ಅನುಭವಿ ರಾಜಕಾರಣಿ. ಆಕಸ್ಮಿಕವಾಗಿ ಇಬ್ಬರೂ ಭೇಟಿಯಾಗಿದ್ದೇನೆ ಅಷ್ಟೇ. ಬೇರೆ ಏನು ಇಲ್ಲ. ಚಲುವರಾಯಸ್ವಾಮಿ ಅವರನ್ನು ಕೈ ಕುಲುಕಿ ಉಭಯ ಕುಶಲೋಪರಿ ವಿಚಾರಿಸಿದ್ದೇನೆ. ರಾಜಕೀಯವಾಗಿ ನಮ್ಮ ಭಿನ್ನಾಭಿಪ್ರಾಯ ಏನೇ ಇರಬಹುದು. ರಾಜಕೀಯವಾಗಿ ಉತ್ತರ ಕೊಡ್ತೇವೆ. ಅದನ್ನು ಹೊರತು ಪಡಿಸಿದ್ರೆ, ಯಾರ ಮೇಲೂ ನಮಗೆ ಅಸಮಾಧಾನ ಇಲ್ಲ. ಪ್ರತಿಯೊಬ್ಬರನ್ನು ಪ್ರೀತಿಯಿಂದ ಕಾಣೋದು ನಮ್ಮ ಸಂಸ್ಕೃತಿ. ಅದಕ್ಕೆಲ್ಲಾ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

Team Newsnap
Leave a Comment
Share
Published by
Team Newsnap

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024