JNU ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ಕರ್ಡೂಮಾ ಹೆಚ್ಚುವರಿ ಸೆಷನ್ಸ್ ನ್ಯಾಯಲಯ ತಿರಸ್ಕರಿಸಿದೆ.
ಎಂಟು ತಿಂಗಳ ಸುದೀರ್ಘ ವಿಚಾರಣೆ ಬಳಿಕ ಇಂದು ನ್ಯಾ.ಅಮಿತಾಭ್ ರಾವತ್ ತೀರ್ಪು ಪ್ರಕಟಿಸಿದ್ದಾರೆ.
2020ರ ಫೆಬ್ರವರಿ 20 ರಂದು ದೆಹಲಿಯಲ್ಲಿ ನಡೆದ ಕೋಮು ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್ನನ್ನು ಬಂಧಿಸಲಾಗಿದೆ
ಈ ಗಲಭೆ ಪ್ರಕರಣದಲ್ಲಿ ಒಳಸಂಚು ಮಾಡಿರುವುದಾಗಿ ಆರೋಪಿಸಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಪ್ರಕರಣ ದಾಖಲಿಸಲಾಗಿತ್ತು. ಬಂಧನ ಬಳಿಕ ಖಾಲಿದ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಖಾಲಿದ್ ಪರ ವಾದ ಮಂಡಿಸಿದ್ದ ವಕೀಲ ತ್ರಿದೀಪ್ ಪೈಸ್, ಇದೊಂದು ಉದ್ದೇಶಪೂರ್ವಕವಾಗಿ ದಾಖಲಿಸಿದ ಪ್ರಕರಣವಾಗಿದೆ.
ಪೊಲೀಸರು ಕಟ್ಟುಕಥೆಯೊಂದನ್ನು ಕಟ್ಟಿದ್ದಾರೆ. ಖಾಲಿದ್ ವಿರುದ್ಧದ ಸಾಕ್ಷಿ ಹೇಳಿಕೆಗಳು ಅಸಮಂಜಸವಾಗಿದೆ ಮತ್ತು ಆರೋಪಪಟ್ಟಿ ದೂರದರ್ಶನ ಧಾರಾವಾಹಿ ಸ್ಕ್ರಿಪ್ಟ್ ಅನ್ನು ಹೋಲುತ್ತದೆ ಎಂದು ವಾದಿಸಿದರು.
ಪ್ರತಿವಾದ ಮಂಡಿಸಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪ್ರಸಾದ್, ದೆಹಲಿ ಗಲಭೆಯು ಆರೋಪಿಗಳು ರೂಪಿಸಿದ ಪೂರ್ವಯೋಜಿತ ಆಳವಾದ ಸಂಚಿನ ಭಾಗವಾಗಿದೆ.
ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭೇಟಿಯನ್ನು ಪ್ರಸ್ತಾಪಿಸಿದ ಪ್ರಾಸಿಕ್ಯೂಟರ್, ಅಂತರರಾಷ್ಟ್ರೀಯ ಮಾಧ್ಯಮಗಳಿಗೆ ಗುರಿಯಾಗುವ ವಾತಾವರಣವನ್ನು ಸೃಷ್ಟಿಸಲು ಖಾಲಿದ್ ಪ್ರಯತ್ನಿಸಿದರು ಎಂದು ವಾದಿಸಿದರು.
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
This website uses cookies.
Leave a Comment