ಪತ್ರಕರ್ತರು ಈಗ ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್ – ಸಿಎಂ ಘೋಷಣೆ

Team Newsnap
0 Min Read

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಮನವಿಯನ್ನು ಪುರಸ್ಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರಕರ್ತರನ್ನು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಣೆ ಮಾಡಿದ್ದಾರೆ.

ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಇಂದು ಮುಖ್ಯಮಂತ್ರಿ ಭೇಟಿ ಮಾಡಿದ ನಿಯೋಗಕ್ಕೆ ಭರವಸೆ ನೀಡಿದ್ದಲ್ಲದೆ, ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ನಿಯೋಗದಲ್ಲಿ ಪತ್ರಕರ್ತರಾದ ರವೀಶ್ , ರಾಚಪ್ಪ, ಅರುಣ್ ಕುಮಾರ್
ಮತ್ತಿತರರು ಉಪಸ್ಥಿತರಿದ್ದರು.‌

ಅಭಿನಂದನೆ:
ಕೆಯುಡಬ್ಲ್ಯೂಜೆ ಮನವಿ ಪರಿಗಣಿಸಿ ಈ ಕ್ರಮ ಕೈಗೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಭಿನಂದಿಸಿದ್ದಾರೆ.

Share This Article
Leave a comment