ಇದು ದೇಶದ ರೈಲ್ವೆ ಮೂಲಸೌಕರ್ಯದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ. ಇಂಟಿಗ್ರಲ್ ಕೋಚ್ ಫ್ಯಾಕ್ಟರಿನಿಂದ ಮೇಕ್ ಇನ್ ಇಂಡಿಯಾ ಉಪಕ್ರಮದ ಅಡಿಯಲ್ಲಿ ತಯಾರಿಸಲ್ಪಟ್ಟ ಈ ಅರೆ-ಹೈ-ವೇಗದ ರೈಲುಗಳು ಭಾರತದಾದ್ಯಂತ ವಿವಿಧ ನಗರಗಳ ನಡುವೆ ಸಂಪರ್ಕವನ್ನು ಹೆಚ್ಚಿಸುತ್ತವೆ.
ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಗೋವಾ, ಪಾಟ್ನಾ-ರಾಂಚಿ, ಭೋಪಾಲ್-ಇಂಧೋರ್, ಭೋಪಾಲ್-ಜಬಲ್ಪುರ ಮತ್ತು ಬೆಂಗಳೂರು-ಹುಬ್ಬಳ್ಳಿ-ಧಾರವಾಡ ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಚಲಿಸಲಿವೆ.
ಈ ಸೇರ್ಪಡೆಗಳೊಂದಿಗೆ ದೇಶದ ರೈಲು ಜಾಲದಲ್ಲಿ ಕಾರ್ಯನಿರ್ವಹಿಸುತ್ತಿರುವ ವಂದೇ ಭಾರತ್ ರೈಲುಗಳ ಒಟ್ಟು ಸಂಖ್ಯೆ 23 ಕ್ಕೆ ಏರಲಿದೆ.
ಬೆಂಗಳೂರು ನಗರದಿಂದ ಬೆಳಗ್ಗೆ 5:45ಕ್ಕೆ ಹೊರಡುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಧ್ಯಾಹ್ನ 12:40ಕ್ಕೆ ಧಾರವಾಡ ತಲುಪಲಿದೆ. ಮಧ್ಯಾಹ್ನ 1:15ಕ್ಕೆ ಧಾರವಾಡದಿಂದ ಹೊರಟು ರಾತ್ರಿ 8.10 ಕ್ಕೆ ಬೆಂಗಳೂರು ತಲುಪಲಿದೆ. ಯಶವಂತಪುರ, ದಾವಣಗೆರೆ, ಹುಬ್ಬಳ್ಳಿ, ಧಾರವಾಡದಲ್ಲಿ ನಿಲುಗಡೆ ಇರಲಿದೆ. 6 ಗಂಟೆ 55 ನಿಮಿಷ ಪ್ರಯಾಣದ ಸಮಯ ಆಗಿರುತ್ತದೆ. ಇದನ್ನು ಓದಿ –ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಕೆಂಚಪ್ಪಗೌಡ ಆಯ್ಕೆ
ಕೆಎಸ್ಆರ್ ಬೆಂಗಳೂರು ನಗರ – ಹುಬ್ಬಳ್ಳಿ ಜನ ಶತಾಬ್ದಿ ಎಕ್ಸ್ ಪ್ರೆಸ್ ಬೆಂಗಳೂರಿನಿಂದ ಬೆಳಗ್ಗೆ 6 ಗಂಟೆಗೆ ಹೊರಟು ಮಧ್ಯಾಹ್ನ 1 ಗಂಟೆಗೆ ಹುಬ್ಬಳ್ಳಿ ತಲುಪಲಿದೆ. ಮಧ್ಯಾಹ್ನ 1:40ಕ್ಕೆ ಹುಬ್ಬಳ್ಳಿಯಿಂದ ಹೊರಡಲಿರುವ ಜನ ಶತಾಬ್ದಿ ರೈಲು ರಾತ್ರಿ 8:55 ಕ್ಕೆ ಕೆಎಸ್ಆರ್ ಬೆಂಗಳೂರು ತಲುಪಲಿದೆ. ಪ್ರಯಾಣದ ಸಮಯ 7 ಗಂಟೆ ಆಗಿರುತ್ತದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು