ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಾಹೇಬ್ ಅವರು ಮೈಶುಗರ್ ಕಾರ್ಖಾನೆಯ ಯಂತ್ರಗಳ ದುರಸ್ತಿ ಕಾರ್ಯವು ಪೂರ್ಣಗೊಂಡಿದೆ ಹೀಗಾಗಿ ನಿರಂತರ ಕಬ್ಬು ಅರೆಯುವಿಕೆಗೆ ಸಿದ್ದತೆ ಮಾಡಲಾಗಿದೆ ಎಂದು ಹೇಳಿದರು.
ಕಬ್ಬು ಕಟಾವು ಹಾಗೂ ಅಗತ್ಯವಾಗಿರುವ ಕಾರ್ಮಿಕರ ವ್ಯವಸ್ಥೆಯನ್ನೂ ಕೂಡ ಕಂಪನಿಯೇ ವ್ಯವಸ್ಥೆ ಮಾಡಲಿದೆ. ಅಲ್ಲದೇ ರೈತರು ಕಬ್ಬು ಕಟಾವು ಮಾಡಿದ 24 ಗಂಟೆಯೊಳಗೆ ಅರೆಯುವಿಕೆ ಎಲ್ಲಾ ರೀತಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.
ರೈತರು ಕಬ್ಬು ಸರಬರಾಜು ಮಾಡಿದ 14 ದಿನಕ್ಕೆ ಕಬ್ಬಿನ ಹಣವನ್ನು ಪಾವತಿಸಲಾಗುವುದು. ರೈತರುಗಳು ಕಂಪನಿಯ ಏಳಿಗೆಗಾಗಿ ತಾವು ಬೆಳೆದ ಗುಣಮಟ್ಟದ ಕಬ್ಬನ್ನು ಖಾಸಗಿ ಕಾರ್ಖಾನೆಗಳಿಗೆ ಪರಭಾರೆ ಮಾಡದೆ ಮೈಸೂರು ಸಕ್ಕರೆ ಕಾರ್ಖಾನೆಗೆ ಸರಬರಾಜು ಮಾಡಬೇಕೆಂದು ಮನವಿ ಮಾಡಿದರು.“ಗೃಹ ಜ್ಯೋತಿ” ಯೋಜನೆಗೆ ನೊಂದಾಯಿಸುವ ಸುಲಭ ಮಾರ್ಗ
ಸರ್ಕಾರದದಿಂದ ಕಾರ್ಖಾನೆಯ ಖಾತೆಗೆ 50 ಕೋಟಿ ಹಣ ಜಮೆ ಆಗಿದೆ. ಸದ್ಯಕ್ಕೆ ಹಣದ ಕೊರತೆ ಇಲ್ಲ. ಕಬ್ಬು ಸರಬರಾಜು ಮಾಡಿದ ರೈತರಿಗೆ 14 ದಿನಗಳಿಗೊಮ್ಮೆ ಹಣ ಬಿಡುಗಡೆ ಮಾಡಲಾಗುವುದು. ಕಾರ್ಖಾನೆಯಲ್ಲಿ 18 ಸಾವಿರ ಕ್ವಿಂಟಲ್ ಸಕ್ಕರೆ ಇದೆ ಅದನ್ನು ಮಾರಾಟ ಮಾಡಿ ಹಣಕಾಸಿನ ಪರಿಸ್ಥಿತಿಯನ್ನು ಸರಿದೂಗಿಸಲಾಗುವುದು.
1000 ಸ್ಥಳೀಯರು ಕಾರ್ಮಿಕರು, ಬಳ್ಳಾರಿಯಿಂದ 1000, ಮಹಾರಾಷ್ಟ್ರ 500, ಬಿಜಾಪುರ 500, ಜಾರ್ಖಂಡ್ ನಿಂದ 500 ಕಾರ್ಮಿಕರು ಸೇರಿದಂತೆ ಒಟ್ಟು 3500 ಕಾರ್ಮಿಕರ ಕೆಲಸ ನಿರ್ವಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯಕ್ಕೆ ಇವಾಗ 300 ಕಾರ್ಮಿಕರು ಕೆಲಸ ನಿರ್ವಹಿಸಿಸುತ್ತಿದ್ದಾರೆ ಎಂದರು.
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment