ಭಾರೀ ಮಳೆಗೆ ನಂಜನಗೂಡಿನ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹದಿನಾರು ಕಾಲು ಮಂಟಪ ಬಹುತೇಕ ಮುಳುಗಡೆಯಾಗಿದೆ. ಹೀಗಾಗಿ ಭಕ್ತರಿಗೆ ಸ್ನಾನಘಟ್ಟದಲ್ಲಿ ಸ್ನಾನಕ್ಕೆ ನಿರ್ಬಂಧ ಹೇರಲಾಗಿದೆ.ಇದನ್ನು ಓದಿ –ಕೇರಳದ ಕಣ್ಣೂರಿನ RSS ಕಚೇರಿ ಮೇಲೆ ಬಾಂಬ್ ದಾಳಿ: ಕಿಟಕಿ ಗಾಜು ಪುಡಿ ಪುಡಿ
ಇನ್ನೂ ಎರಡು ದಿನ ಇದೇ ಪ್ರಮಾಣದಲ್ಲಿ ನೀರಿನ ಹೊರ ಹರಿವು ಇದ್ದರೆ, ನಂಜನಗೂಡಿನ ಬಹುತೇಕ ತಗ್ಗು ಪ್ರದೇಶಗಳ ಮನೆಗಳು ಮುಳುಗಡೆಯಾಗುವುದು ನಿಶ್ಚಿತವಾಗಿದೆ.
ಕಬಿನಿ ಜಲಾಶಯದಿಂದ ಹೆಚ್ಚಿನ ನೀರು ಹೊರ ಬಿಡುತ್ತಿರುವ ಕಾರಣ ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ. ನಂಜನಗೂಡು ಪಟ್ಟಣದ ಹೊರ ವಲಯದಲ್ಲಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ. ಪರಶುರಾಮ ದೇವರಿಗೆ ಜಲದಿಗ್ಭಂಧನ ಸೃಷ್ಟಿಯಾಗಿದೆ ನೀರಿನ ಪ್ರಮಾಣ ತಗ್ಗುವವರೆಗೂ ದೇವರಿಗೆ ಪೂಜೆ ಇಲ್ಲ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು