ಇದೇ ಮೊದಲ ಬಾರಿಗೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್ 25 ಮತ್ತು 26 ರಂದು ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಶೀರ್ಷಿಕೆಯಡಿ ಕಂಬಳವನ್ನು ಆಯೋಜಿಸಲಾಗಿದೆ. ಕಂಬಳಕ್ಕೆ ಬರುವ ಕೋಣಗಳನ್ನು ನೋಡುವ ಖುಷಿ ಒಂದೆಡೆಯಾದ್ರೆ ಇತ್ತ ಕಂಬಳ ಮಹೋತ್ಸವದಲ್ಲಿ ಗೆಲ್ಲುವ ಕೋಣಗಳಿಗೆ ಭಾರೀ ಮೊತ್ತದ ನಗದು ಹಾಗೂ ಚಿನ್ನವನ್ನು ನೀಡಲಾಗುತ್ತದೆ.
ಕರಾವಳಿ ಪ್ರದೇಶಗಳಿಂದ ಸುಮಾರು 200 ಜೋಡಿ ಎಮ್ಮೆಗಳು ಮಾಲೀಕರೊಂದಿಗೆ ಇಂದು ಬೆಂಗಳೂರು ತಲುಪುವ ಸಾಧ್ಯತೆ ಇದ್ದು, ನಗರದ ಅರಮನೆ ಮೈದಾನದಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದೆ. ಭಾಗವಹಿಸುವವರು ಗುರುವಾರ ಪ್ರಾಯೋಗಿಕ ರನ್ ತೆಗೆದುಕೊಳ್ಳುತ್ತಾರೆ ಎಂದು ವರದಿಯಾಗಿದೆ.
ಬೆಂಗಳೂರು ಕಂಬಳದಲ್ಲಿ ವಿಜೇತರಾಗುವ ಕೋಣದ ಮಾಲೀಕರಿಗೆ ಬಹುಮಾನ:
ಬೆಂಗಳೂರು ಕರಾವಳಿ ಕರ್ನಾಟಕದ 18 ಲಕ್ಷ ಜನರಿಗೆ ನೆಲೆಯಾಗಿದೆ. ಅವರಲ್ಲಿ ಸುಮಾರು ಎಂಟು ಲಕ್ಷ ಜನರು ಎರಡು ದಿನಗಳ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಗಳಿವೆ. ಕಂಬಳದ ವೇಳೆ ಆಹಾರ, ಕಲಾಕೃತಿಗಳು ಮತ್ತು ಇತರ ವಸ್ತುಗಳ 150 ಕ್ಕೂ ಹೆಚ್ಚು ಮಳಿಗೆಗಳನ್ನು ಹಾಕಲಾಗುತ್ತದೆ.
ಎಲ್ಲರೂ ಬಂದು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಗ್ಯಾಲರಿ ವ್ಯವಸ್ಥೆಯು ಇರಲಿದೆ. ಸಾರ್ವಜನಿಕರು ಈ ಕಂಬಳಕ್ಕೆ ಬರಲಿದ್ದಾರೆ. ವಿವಿಐಪಿ, ವಿಐಪಿಗೆ ಸೆಪೆರೇಟ್ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗೆ ಯಾವುದೇ ಟಿಕೆಟ್ ಇಲ್ಲ. ಫ್ರೀಯಾಗಿ ಬಂದು ನೋಡಬಹುದು. ಬಂದವರಿಗೆ ಊಟದ ವ್ಯವಸ್ಥೆ ಕೂಡ ಇರಲಿದೆ. ಕುಟುಂಬ ಸಮೇತವಾಗಿ ಬಂದು ವೀಕ್ಷಿಸಬಹುದು.ಸಚಿವ ಜಮೀರ್ ತಂಗಿದ್ದ ಹೊಟೇಲ್ ಮೇಲೆ ಪೊಲೀಸರ ದಾಳಿ
ನ. 24 ರಂದು ಶುಕ್ರವಾರ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ. ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪರಮೇಶ್ವರ್, ಬಸವರಾಜ್ ಬೊಮ್ಮಯಿ, ಶೋಭಾ ಕರಂದ್ಲಾಜೆ ಸೇರಿದಂತೆ ಎಲ್ಲ ಶಾಸಕರು, ಸಚಿವರುಗಳು ಬರಲಿದ್ದಾರೆ. ಸರ್ಕಾರದಿಂದ ಒಂದು ಕೋಟಿ ಅನುದಾನ ಕೊಟ್ಟಿದ್ದಾರೆ. ಆದರೆ 7 ರಿಂದ 8 ಕೋಟಿ ಖರ್ಚಾಗುತ್ತಿದೆ. ಉಳಿದ ಹಣವನ್ನ ಸಂಘ- ಸಂಸ್ಥೆಗಳಿಂದ ಸಂಗ್ರಹಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು