Karnataka

ನವೆಂಬರ್ 25 ಮತ್ತು 26 ರಂದು ಬೆಂಗಳೂರಿನಲ್ಲಿ ಕಂಬಳ. ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು: ಕರ್ನಾಟಕದ ರಾಜಧಾನಿ ಈ ವಾರಾಂತ್ಯದಲ್ಲಿ ಕರಾವಳಿ ಪ್ರದೇಶದ ಜನಪ್ರಿಯ ಸಾಂಸ್ಕೃತಿಕ ಕ್ರೀಡೆ ‘ಕಂಬಳ’ವನ್ನು ಆಯೋಜಿಸಲು ಸಜ್ಜಾಗುತ್ತಿದೆ ಮತ್ತು ಅದ್ಧೂರಿಯಾಗಿ ನಡೆಸಲು ಸಂಘಟಕರು ಯೋಜಿಸಿದ್ದಾರೆ.

ಇದೇ ಮೊದಲ ಬಾರಿಗೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್ 25 ಮತ್ತು 26 ರಂದು ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಶೀರ್ಷಿಕೆಯಡಿ ಕಂಬಳವನ್ನು ಆಯೋಜಿಸಲಾಗಿದೆ. ಕಂಬಳಕ್ಕೆ ಬರುವ ಕೋಣಗಳನ್ನು ನೋಡುವ ಖುಷಿ ಒಂದೆಡೆಯಾದ್ರೆ ಇತ್ತ ಕಂಬಳ ಮಹೋತ್ಸವದಲ್ಲಿ ಗೆಲ್ಲುವ ಕೋಣಗಳಿಗೆ ಭಾರೀ ಮೊತ್ತದ ನಗದು ಹಾಗೂ ಚಿನ್ನವನ್ನು ನೀಡಲಾಗುತ್ತದೆ.

ಕರಾವಳಿ ಪ್ರದೇಶಗಳಿಂದ ಸುಮಾರು 200 ಜೋಡಿ ಎಮ್ಮೆಗಳು ಮಾಲೀಕರೊಂದಿಗೆ ಇಂದು ಬೆಂಗಳೂರು ತಲುಪುವ ಸಾಧ್ಯತೆ ಇದ್ದು, ನಗರದ ಅರಮನೆ ಮೈದಾನದಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದೆ. ಭಾಗವಹಿಸುವವರು ಗುರುವಾರ ಪ್ರಾಯೋಗಿಕ ರನ್ ತೆಗೆದುಕೊಳ್ಳುತ್ತಾರೆ ಎಂದು ವರದಿಯಾಗಿದೆ.

ಕಂಬಳ ವಿಜೇತರ ಬಹುಮಾನ:

ಬೆಂಗಳೂರು ಕಂಬಳದಲ್ಲಿ ವಿಜೇತರಾಗುವ ಕೋಣದ ಮಾಲೀಕರಿಗೆ ಬಹುಮಾನ:

  1. ಮೊದಲ ಸ್ಥಾನ
    • 1 ಲಕ್ಷ ರೂ. ನಗದು, 16 ಗ್ರಾಂ ಸ್ವರ್ಣ.
  2. ದ್ವಿತೀಯ ಸ್ಥಾನ
    • 50,000 ರೂ. ಜತೆಗೆ 8 ಗ್ರಾಂ ಚಿನ್ನ
  3. ತೃತೀಯ ಸ್ಥಾನ
    • 25,000 ರೂ. ನಗದು ಹಾಗೂ 4 ಗ್ರಾಂ ಬಂಗಾರದ ಪದಕ

ಬೆಂಗಳೂರು ಕರಾವಳಿ ಕರ್ನಾಟಕದ 18 ಲಕ್ಷ ಜನರಿಗೆ ನೆಲೆಯಾಗಿದೆ. ಅವರಲ್ಲಿ ಸುಮಾರು ಎಂಟು ಲಕ್ಷ ಜನರು ಎರಡು ದಿನಗಳ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಗಳಿವೆ. ಕಂಬಳದ ವೇಳೆ ಆಹಾರ, ಕಲಾಕೃತಿಗಳು ಮತ್ತು ಇತರ ವಸ್ತುಗಳ 150 ಕ್ಕೂ ಹೆಚ್ಚು ಮಳಿಗೆಗಳನ್ನು ಹಾಕಲಾಗುತ್ತದೆ.

ಕಂಬಳಕ್ಕೆ ಸಾರ್ವಜನಿಕರಿಗೆ ಫ್ರೀ:

ಎಲ್ಲರೂ ಬಂದು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಗ್ಯಾಲರಿ ವ್ಯವಸ್ಥೆಯು ಇರಲಿದೆ. ಸಾರ್ವಜನಿಕರು ಈ ಕಂಬಳಕ್ಕೆ ಬರಲಿದ್ದಾರೆ. ವಿವಿಐಪಿ, ವಿಐಪಿಗೆ ಸೆಪೆರೇಟ್ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗೆ ಯಾವುದೇ ಟಿಕೆಟ್ ಇಲ್ಲ. ಫ್ರೀಯಾಗಿ ಬಂದು ನೋಡಬಹುದು. ಬಂದವರಿಗೆ ಊಟದ ವ್ಯವಸ್ಥೆ ಕೂಡ ಇರಲಿದೆ. ಕುಟುಂಬ ಸಮೇತವಾಗಿ ಬಂದು ವೀಕ್ಷಿಸಬಹುದು.ಸಚಿವ ಜಮೀರ್ ತಂಗಿದ್ದ ಹೊಟೇಲ್ ಮೇಲೆ ಪೊಲೀಸರ ದಾಳಿ

ನ. 24 ರಂದು ಶುಕ್ರವಾರ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ. ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪರಮೇಶ್ವರ್, ಬಸವರಾಜ್ ಬೊಮ್ಮಯಿ, ಶೋಭಾ ಕರಂದ್ಲಾಜೆ ಸೇರಿದಂತೆ ಎಲ್ಲ ಶಾಸಕರು, ಸಚಿವರುಗಳು ಬರಲಿದ್ದಾರೆ. ಸರ್ಕಾರದಿಂದ ಒಂದು ಕೋಟಿ ಅನುದಾನ ಕೊಟ್ಟಿದ್ದಾರೆ. ಆದರೆ 7 ರಿಂದ 8 ಕೋಟಿ ಖರ್ಚಾಗುತ್ತಿದೆ. ಉಳಿದ ಹಣವನ್ನ ಸಂಘ- ಸಂಸ್ಥೆಗಳಿಂದ ಸಂಗ್ರಹಿಸಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024