ತಮಿಳುನಾಡು ರಾಜಕೀಯ ಮತ್ತು ಚಿತ್ರರಂಗದಲ್ಲೇ ತಮ್ಮದೇ ಛಾಪು ಬಿಟ್ಟು ಹೋಗಿರುವ, ಬಹಳಷ್ಟು ಜನರಿಗೆ ಅಮ್ಮನಂತೆ ಭಾಸವಾಗಿರುವ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಜೀವನಾಧಾರಿತ ಚಿತ್ರ “ತಲೈವಿ’ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.
ಈ ಚಿತ್ರದಲ್ಲಿ ಜಯಲಲಿತಾ ಪಾತ್ರಧಾರಿ, ಬಾಲಿವುಡ್ ನಟಿ ಕಂಗನಾ ರಣಾವತ್ ಇಂದು ಬೆಳಗ್ಗೆ ಚೆನೈ ನಾ ಮರೀನಾ ಬೀಚ್ ಸಮೀಪವಿರುವ ಜಯಾ ಸಮಾಧಿಗೆ ಭೇಟಿ ನೀಡಿ ಗೌರವ ಸಲ್ಲಿಸಿದರು. ವಿವಾದಗಳಿಂದಲೇ ಸುದ್ದಿ ಮಾಡುವ ಕಂಗನಾ, ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿ ಅಭಿಮಾನಿಗಳ ರಂಜಿಸುವ ಗುಣಧರ್ಮ ಹೊಂದಿದ್ದಾರೆ ಎಂಬ ಮಾತು ಇದೆ.
ತಮಿಳು, ತೆಲುಗು ಮತ್ತು ಹಿಂದಿ ಭಾಷೆಯಲ್ಲಿ ತಯಾರಾಗಿರುವ ಈ ಚಿತ್ರ ಸೆಪ್ಟೆಂಬರ್ 10 ರಂದು ತೆರೆಯ ಮೇಲೆ ವಿಜೃಂಭಿಸಲಿದೆ.
ಈಗಾಗಲೇ “ತಲೈವಿ’ ಪೋಸ್ಟರ್, ಟೀಸರ್ ಮತ್ತು ಹಾಡಿನ ಸಣ್ಣ ದೃಶ್ಯಗಳು ಬಿಡುಗಡಯಾಗಿ ಚಿತ್ರರಸಿಕರನ್ನು ರಂಜಿಸಿವೆ. ನಟ ಅರವಿಂದ್ ಸ್ವಾಮಿ ಈ ಚಿತ್ರದಲ್ಲಿ ಎಂಜಿಆರ್ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದ ಚಿತ್ರಕಥೆ ಬರದಿರುವುದು ಕೆ.ವಿ. ವಿಜಯೇಂದ್ರ ಪ್ರಸಾದ್. ತಮಿಳಿನ ಹೆಸರಾಂತ ನಿರ್ದೇಶಕ ಎ.ಎಲ್. ವಿಜಯ್ ಚಿತ್ರದ ನಿರ್ದೇಶಕರು.
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment