January 29, 2026

Newsnap Kannada

The World at your finger tips!

sudeep

ಕನ್ನಡ ಸಿನಿಮಾ,ಸಂಸ್ಕೃತಿ ನನ್ನ ಉಸಿರು : ಕಿಚ್ಚ ಸುದೀಪ್

Spread the love

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿ ವತಿಯಿಂದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ವಿಜೇತರನ್ನು ಪ್ರಕಟಿಸಲಾಗಿದೆ.

‘ಕನ್ನಡ ಸಿನಿಮಾ ಮತ್ತು ಕನ್ನಡ ಸಂಸ್ಕೃತಿ’ ವಿಷಯದಲ್ಲಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ನಟ ಸುದೀಪ್ ಶುಭ ಹಾರೈಸಿದ್ದಾರೆ.

”ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ 304 ಜನ ವಿದ್ಯಾರ್ಥಿಗಳಿಗೆ ಅಭಿನಂದನೆ, “ಕನ್ನಡ ಸಿನಿಮಾ ಮತ್ತು ಕನ್ನಡ ಸಂಸ್ಕೃತಿ” ಎಂದೆಂದಿಗೂ ನನ್ನ ಉಸಿರು. #ಮೊದಲು_ಮಾನವನಾಗು” ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

error: Content is protected !!