ಖಾಸಗೀ ರಂಗದಲ್ಲಿ, ಇತರೆ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಸಲುವಾಗಿ ಕರಡು ವಿಧೇಯಕ ಸಿದ್ಧಪಡಿಸಿ ವರ್ಷ ಕಳೆದಿದೆ. ಆದರೆ ವಿಧಾನಸಭೆಯ ಅಧಿವೇಶನದಲ್ಲಿ ಈ ಕುರಿತು ವಿಷಯ ಮಂಡನೆಯಾಗೇ ಇಲ್ಲ. ಮೂರು ಸರ್ಕಾರಗಳು ಬಂದರೂ ಸದನದಲ್ಲಿ ಮಂಡಿಸಲು, ಯಾವ ಸರ್ಕಾರಕ್ಕೂ ಬಿಡುವೇ ಸಿಕ್ಕಿಲ್ಲ.
ಕೈಗಾರಿಕೋದ್ಯಮ, ನವೋದ್ಯಮ, ಪ್ರವಾಸೋದ್ಯಮ, ಹೋಟೆಲ್ ಉದ್ಯಮ, ವಾಣಿಜ್ಯ ಸಂಸ್ಥೆ, ಖಾಸಗಿ ವಿವಿ, ಬಹುರಾಷ್ಟ್ರೀಯ ಕಂಪನಿ ಇಲ್ಲೆಲ್ಲ ಕನ್ನಡಿಗರಿಗೆ ಉದ್ಯೋಗ ಮೀಸಲಿಡುವಂತೆ ವರ್ಷದಿಂದ ವರ್ಷಕ್ಕೆ ಹಕ್ಕೊತ್ತಾಯ ಹೆಚ್ಚಾಗುತ್ತಿದ್ದರೂ, ಸರ್ಕಾರಗಳು ಮಾತ್ರ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ.
ಖಾಸಗೀ ರಂಗದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಿರುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಸರ್ಕಾರವು ಘೋಷಣೆ ಹೊರಡಿಸಿತ್ತು. ಆ ನಂತರ ಬಂದ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಯವರ ಸಂಪುಟ ಸಭೆಯಲ್ಲಿ ‘ಕರ್ನಾಟಕ ಉದ್ಯೋಗಿಕ ಕೈಗಾರಿಕೆಗಳ ನಿಯಮಾವಳಿಗಳ ನಿಯಮಗಳು – ೨೦೧೯’ ಕ್ಕೆ ಅನುಮೋದನೆಯನ್ನೂ ನೀಡಲಾಗಿತ್ತು. ಆದರೆ ಈ ವರೆಗೆ ಸದನದಲ್ಲಿ ಅದರ ಬಗ್ಗೆ ಚರ್ಚೆಯೇ ಆಗಿಲ್ಲ.
ಖಾಸಗೀ ಉದ್ಯಮಗಳಲ್ಲಿ, ಕನ್ನಡಿಗರಿಗೆ ಗ್ರುಪ್ ಸಿ ಮತ್ತು ಡಿ ಹುದ್ದೆಗಳಲ್ಲಿ ಶೇ.೩೦, ಉನ್ನತ ಹುದ್ದೆಗಳಲ್ಲಿ ಶೇ ೮೦ ಹಾಗೂ ಕ್ಯಾಂಪಸ್ ಸಂದರ್ಶನದಲ್ಲಿ ಸರ್ಕಾರದ ಒಬ್ಬ ಪ್ರತಿನಿಧಿ ಇರಲೇಬೇಕೆಂದು ಹಕ್ಕೊತ್ತಾಯ ಮಾಡಲಾಗಿದೆ.
ಈ ಸಂಬಂಧ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಟಿ.ಎಸ್. ನಾಗಾಭರಣ ‘ಈ ಬಾರಿ ವಿಧೆಯಕ ಮಂಡನೆಯಾಗುವ ವಿಶ್ವಾಸವಿದೆ. ಕೆಲ ದಿನಗಳ ಹಿಂದೆ ಕಾರ್ಮಿಕ ಸಚಿವರ ಭೇಟಿಯಾಗಿ ಮಾತನಾಡಲಾಗಿದೆ’ ಎಂದರು.
ಈ ಬಾರಿಯಾದರೂ ಸದನದಲ್ಲಿ ವಿಧೇಯಕ ಮಂಡನೆಯಾಗಿ, ಕನ್ನಡಿಗರಿಗೆ ಖಾಸಗೀ ಕ್ಷೇತ್ರದ ಉದ್ಯೋಗಗಳಲ್ಲಿ ಮೀಸಲಾತಿ ಸಿಗುವಂತಾಗಲಿ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment