ಕನ್ನಡಿಗರಿಗೊಂದು ಸಿಹಿಸುದ್ದಿ. ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಆಶ್ರಯದಲ್ಲಿ ನಡೆಯುತ್ತಿರುವ “ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್'(ಎಸ್ವಿಬಿಸಿ)ನಲ್ಲಿ ಇನ್ನು ಮುಂದೆ ಕನ್ನಡ ಭಾಷೆಯಲ್ಲೂ ಕಾರ್ಯಕ್ರಮಗಳು ಪ್ರಸಾರವಾಗಲಿವೆ. ಹಾಗೆಯೆ ಹಿಂದಿಯಲ್ಲೂ ಸಹ. ತಿರುಮಲದಲ್ಲಿ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಆಂಧ್ರದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ಈ ಎರಡೂ ಭಾಷೆಗಳ ಕಾರ್ಯಕ್ರಮಗಳ ಪ್ರಸಾರಕ್ಕೆ ಮಂಗಳವಾರ ಚಾಲನೆ ನೀಡಿದರು. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಆಹ್ವಾನ ನೀಡಲಾಗಿತ್ತು. ಆದರೆ ಅವರು ಸಮಾರಂಭಕ್ಕೆ ಬಂದಿರಲಿಲ್ಲ.
2008 ರಲ್ಲಿ ಆರಂಭಗೊಂಡ, 24 ಗಂಟೆಗಳ ಕಾಲ ಭಕ್ತಿ ಪ್ರದಾನ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ತೆಲುಗು ಭಾಷೆಯ “ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್’ ಗೆ ಅಂದಿನ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಚಾಲನೆ ನೀಡಿದ್ದರು. ದಶಕದ ನಂತರ ತಮಿಳು ಭಾಷೆಯಲ್ಲೂ ಕಾರ್ಯಕ್ರಮಗಳ ಪ್ರಸಾರ ಆರಂಭಿಸಲಾಯಿತು ಎಂದು ದೇವಾಲಯದ ಅಧಿಕಾರಿಗಳು ಹೇಳಿದರು.
ಜಗನ್ ಮೋಹನ್ ರೆಡ್ಡಿ ಅವರು ತಿರುಪತಿ ಬೆಟ್ಟದ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಲಡ್ಡು ಪ್ರಸಾದ ಸಿದ್ಧಪಡಿಸಲೆಂದೇ ದೇವಸ್ಥಾನದ ಸಂಕೀರ್ಣದ ಹಿಂಭಾಗದಲ್ಲಿ 12 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಅಡುಗೆ ಮನೆಯನ್ನೂ ಉದ್ಘಾಟಿಸಿದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment