Karnataka

ಕನ್ನಡ ವಿವಿಯಿಂದ ಡಾ.ರಾಜ್ ಕುರಿತು ಅಧ್ಯಯನಶೀಲ ಮಾಹಿತಿ ಸಂಗ್ರಹಕ್ಕೆ ಕ್ರಮ – ಡಾ ರಮೇಶ್

ಕನ್ನಡ ವಿಶ್ವವಿದ್ಯಾಲಯ ಡಾ.ರಾಜ್ ಕುಮಾರ್ ಬಗ್ಗೆ ಅಧ್ಯಯನಶೀಲ ಮಾಹಿತಿಯನ್ನು ಕ್ರೋಢೀಕರಿಸುವ ಕೆಲಸವನ್ನು ಕೈಗೆತ್ತಿಕೊಂಡಿದೆ ಎಂದು ಹಂಪೆ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಸ.ಚಿ.ರಮೇಶ ಹೇಳಿದರು.

ಹಂಪೆ ಕನ್ನಡ ವಿಶ್ವವಿದ್ಯಾಲಯದ ಡಾ.ರಾಜಕುಮಾರ್ ಅಧ್ಯಯನ ಪೀಠ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಂವಹನ ವಿಭಾಗದ ಆಶ್ರಯದಲ್ಲಿ ಮಂಗಳವಾರ ಜ್ಞಾನಜ್ಯೋತಿ ಸಭಾಂಗಂಣದ ಸೆನೆಟ್ ಹಾಲಿನಲ್ಲಿ ಡಾ.ರಾಜಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಏರ್ಪಡಿಸಲಾಗಿದ್ದ ವಿಚಾರ ಸಂಕಿರಣ ಕಾರ್ಯಕ್ರವನ್ನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಲಿಂಗರಾಜ ಗಾಂಧಿ, ವಿಶ್ವವಿದ್ಯಾಲಯಗಳು ಕೇವಲ ಪಠ್ಯಪುಸ್ತಕಕ್ಕೆ ಅಂಟಿಕೊಳ್ಳದೆ, ಸಮಾಜಕ್ಕೆ ಕೊಡುಗೆ ನೀಡಿದ ಮಹಾನುಭಾವರನ್ನು ಸಮಾಜಕ್ಕೆ ಹಾಗೂ ವಿದ್ಯಾರ್ಥಿವೃಂದಕ್ಕೆ ಪರಿಚಯ ಮಾಡಿಸುವ ಕೆಲಸವನ್ನು ಮಾಡಬೇಕಿದೆ ಈ ನಿಟ್ಟಿನಲ್ಲಿ
ಬೆಂಗಳೂರು ನಗರ ವಿಶ್ವವಿದ್ಯಾಲಯ ಕಾರ್ಯೋನ್ಮುಖವಾಗಿದೆ ಎಂದು ಹೇಳಿದರು.

ಡಾ.ರಾಜಕುಮಾರ್ ಅವರ ಚಲನಚಿತ್ರಗಳಲ್ಲಿ ಜೀವನಮೌಲ್ಯಗಳಿಂದ ತುಂಬಿದೆ. ಅವರ ಬಗ್ಗೆ ಮಾತನಾಡುವುದು ಕನ್ನಡದ ಬಗ್ಗೆ ಮಾತನಾಡಿದಂತಾಗುತ್ತದೆ ಎಂದರು.

ಡಾ.ರಾಜಕುಮಾರ್ ಅವರ ಅಪರೂಪದ ಘಟನೆಗಳನ್ನು ಮೆಲುಕು ಹಾಕಿದ ಚಿತ್ರ ಸಾಹಿತಿ ಅ.ನಾ.ಪ್ರಹ್ಲಾದರಾವ್ ರಾಜಕುಮಾರ್ ಪ್ರಪಂಚದ ಎಲ್ಲ ಸ್ತರದ ಜನರಿಗೆ ಮಾದರಿಯಾಗಿದ್ದಾರೆ ಎಂದರು.

ರಾಜಕುಮಾರ್ ಕೆನಡ ದೇಶಕ್ಕೆ ಭೇಟಿ ನೀಡಿದಾಗ ಸ್ವಾರಸ್ಯಕರ ಘಟನೆಯೊಂದನ್ನು ಸ್ಮರಿಸಿದರು, ಅಲ್ಲಿನ ಚರ್ಚ್ ಒಂದಕ್ಕೆ ಭೇಟಿ ನೀಡಿದ್ದ ರಾಜಕುಮಾರ್ ನಿವೇದನೆ ಪುಸ್ತಕದಲ್ಲಿ ‘ತಮಗೆ ಅಹಂಕಾರ ನೀಡಬೇಡ’ ಎಂದು ಬರೆದಿದ್ದರೆಂದು ಪ್ರಹ್ಲಾದರಾವ್ ಹೇಳಿದರು.

ಸರ್ಕಾರಿ ಕಲಾ ಕಾಲೇಜಿನ ಕನ್ನಡ ಅಧ್ಯಯನ ವಿಭಾಗದ ಸಂಯೋಜಕ ಡಾ. ಬಿ.ಸಿ.ನಾಗೇಂದ್ರಕುಮಾರ್ ರಾಜಕುಮಾರ್ ಚಿತ್ರಗಳಲ್ಲಿನ ಸಾಮಾಜಿಕ ಅನುಸಂಧಾನ ನೆಲೆಗಳ ಬಗ್ಗೆ ಮಾತನಾಡಿದರು.

ಕಲಾ ನಿಕಾಯದ ಮುಖ್ಯಸ್ಥರಾದ ಪ್ರೊ.ಎನ್.ನರಸಿಂಹಮೂರ್ತಿ ಸ್ವಾಗತ ಕೋರಿದರು. ರಾಜಕುಮಾರ್ ಅಧ್ಯಯನ ಕೇಂದ್ರದ ಮುಖ್ಯಸ್ಥರಾದ ಪ್ರೊ.ಕೆ.ಸಿ.ಶಿವಾರೆಡ್ಡಿ ಕಾರ್ಯಕ್ರಮದ ಬಗ್ಗೆ ಆಶಯ ಭಾಷಣ ಮಾಡಿದರು.

Team Newsnap
Leave a Comment
Share
Published by
Team Newsnap

Recent Posts

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ

ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More

April 27, 2024

14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ

ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More

April 27, 2024