ಉಕ್ರೇನ್ನಲ್ಲಿ ಸಿಲುಕಿದ್ದ ಭಾರತೀಯರನ್ನು ಇಂದು ಮುಂಜಾನೆ ರೊಮೇನಿಯಾದ ಬುಕಾರೆಸ್ಟ್ನಿಂದ 250 ಮಂದಿ ಭಾರತೀಯರನ್ನು ಹೊತ್ತ 2ನೇ ವಿಮಾನ ದೆಹಲಿ ತಲುಪಿದೆ.
ಈ 2ನೇ ವಿಮಾನದಲ್ಲಿ 13 ಜನ ಕನ್ನಡಿಗರು ಕೂಡ ಸುರಕ್ಷಿತವಾಗಿ ತಾಯ್ನಾಡು ತಲುಪಿದ್ದಾರೆ.
ದೆಹಲಿಗೆ ಆಗಮಿಸಿದ ಕನ್ನಡಿಗರಿಗೆ ಕರ್ನಾಟಕ ಭವನದಲ್ಲಿ ಉಳಿದುಕೊಳ್ಳೋಕೆ ವ್ಯವಸ್ಥೆ ಮಾಡಲಾಗಿತ್ತು. ಆ ಬಳಿಕ ಅವರನ್ನು ಬೆಂಗಳೂರಿಗೆ ಕಳಿಸಿಕೊಡುವ ಎಲ್ಲಾ ಏರ್ಪಾಟುಗಳನ್ನು ಮಾಡಲಾಗಿತ್ತು.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿದ್ಯಾರ್ಥಿಗಳನ್ನು ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ಹಾಗೂ ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ತುಂಬು ಹೃದಯದಿಂದ ಬರಮಾಡಿಕೊಂಡಿದ್ದಾರೆ.
ಧನ್ಯತಾ ಭಾವ ಹೊತ್ತು ವಿಮಾನದಿಂದ ಇಳಿದ ವಿದ್ಯಾರ್ಥಿಗಳು ಉಭಯ ನಾಯಕರಿಗೆ ಗುಲಾಬಿ ಹೂ ನೀಡಿ ಧನ್ಯವಾದ ತಿಳಿಸಿದ್ದಾರೆ.
ಆ ಬಳಿಕ ಆರ್. ಅಶೋಕ್ ವಿದ್ಯಾರ್ಥಿಗಳ ಜೊತೆ ಕುಳಿತು ಕೆಲ ಹೊತ್ತು ಚರ್ಚೆ ನಡೆಸಿದ್ದ, ಉಕ್ರೇನ್ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ