ಕಾಂಗ್ರೆಸ್ ವಿರೋಧಿಸಲು ಬಿಜೆಪಿ ನಾಯಕರು ನನಗೆ ಸುಪಾರಿ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ನನಗೆ ಸುಪಾರಿ ಕೊಟ್ಟಿರೋದು ಬಿಜೆಪಿಯವರಲ್ಲ, ಕನ್ನಡಿಗರು. ಎರಡು ರಾಷ್ಟ್ರೀಯ ಪಕ್ಷಗಳನ್ನು ಹೊರ ಹಾಕಲು ಕನ್ನಡಿಗರು ಸುಪಾರಿ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮಾರ್ಮಿಕವಾಗಿ ತಿವಿದರು.
ಬೆಂಗಳೂರಿನಲ್ಲಿ ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಪಕ್ಷವು ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಬಿಜೆಪಿ ನಾಯಕರು ಎಷ್ಟು ಕಾರಣವೋ, ಕಾಂಗ್ರೆಸ್ ನಾಯಕರು ಅಷ್ಟೇ ಕಾರಣ. ಅಪಮಾರ್ಗದ ಮೂಲಕ ನನ್ನ ನೇತೃತ್ವದ ಮೈತ್ರಿ ಸರ್ಕಾರವನ್ನು ತೆಗೆದರು. ಅದೇ ರೀತಿಯ ಅಪಮಾರ್ಗದ ಮೂಲಕ ಬಿಜೆಪಿ ಸರ್ಕಾರ ಬಂತು. ಆದರೆ ಇವತ್ತು ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ನಾಯಕರು ಅನೈತಿಕ ಸರ್ಕಾರ ಎಂದು ಹೇಳುತ್ತಿದ್ದಾರೆ. ಇದನ್ನು ರಾಜ್ಯದ ಜನರು ಗಮನಿಸಬೇಕು ಎಂದು ರಾಜ್ಯ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.
ಬೆಂಗಳೂರಿಗೆ ಸರಿಯಾದ ಸೌಕರ್ಯ ನೀಡಿ ಎಂದು ಉದ್ಯಮಿ ಟಿ.ಎ ಮೋಹನ್ ದಾಸ್ ಪೈ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ರಾಜ್ಯದ ಸ್ಥಿತಿಯನ್ನು ಬಿಜೆಪಿ ಎಲ್ಲಿಗೆ ತಂದಿದೆ? ಯಾವುದೇ ಕೆಲಸ ಆಗಬೇಕಾದರೆ ಸರ್ಕಾರಕ್ಕೆ ನ್ಯಾಯಾಲಯವೇ ಆದೇಶ ಕೊಡಬೇಕು ಅಥವಾ ಮೋದಿ ಅವರೇ ಹೇಳಬೇಕಾ? ಎಂದು ರಾಜ್ಯ ಸರ್ಕಾರದ ಕಾರ್ಯವೈಖರಿ ಕುರಿತು ವ್ಯಂಗ್ಯವಾಡಿದ್ದಾರೆ.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment