ಕ್ರೀಡಾ ಇಲಾಖೆ ವತಿಯಿಂದ ನೀಡುವ 2020-21ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾರಾಯಣಗೌಡ ಪ್ರಕಟಿಸಿದರು.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ನಾರಾಯಣಗೌಡ, ಏಕಲವ್ಯ ಪ್ರಶಸ್ತಿಗೆ 15, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ 14, ಕರ್ನಾಟಕ ಕ್ರೀಡಾಪೋಷಕ ಪ್ರಶಸ್ತಿಗೆ 10 ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗೆ ಇಬ್ಬರನ್ನು ಆಯ್ಕೆ ಮಾಡಲಾಗಿದೆ.
2020-21 ನೇ ಸಾಲಿನಲ್ಲಿ ಏಕಲವ್ಯ ಪ್ರಶಸ್ತಿಗೆ 151, ಕರ್ನಾಟಕ ಕ್ರೀಡಾರತ್ನ 53, ಕ್ರೀಡಾ ಪೋಷಕ 25 ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗೆ 28 ಅರ್ಜಿಗಳು ಸ್ವೀಕೃತವಾಗಿದ್ದವು.
ಇದರಲ್ಲಿ ಪ್ರಶಸ್ತಿ ಆಯ್ಕೆಗೆ ನೇಮಿಸಲಾಗಿದ್ದ ತಜ್ಞರ ಸಮಿತಿ ಪರಿಶೀಲನೆ ನಡೆಸಿ ಅರ್ಹರನ್ನು ಆಯ್ಕೆ ಮಾಡಿದೆ.
ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ದಿನಾಂಕವನ್ನು ನಿಗದಿ ಮಾಡಿ ಶೀಘ್ರದಲ್ಲೇ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಚಿವ ನಾರಾಯಣಗೌಡ ಹೇಳಿದರು.
- ಕೇಂದ್ರ ಮಂತ್ರಿ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ : ಸಂಪುಟ ರಚನೆ ಬಗ್ಗೆ ಮಾತುಕತೆ ಇಲ್ಲ : ಸಿಎಂ
- ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
- ಕಾಂಗ್ರೆಸ್ನಲ್ಲೂ ಪರಷತ್ ಟಿಕಟ್ ಗೆ ಜೋರಾಯ್ತು ಗಲಾಟೆ – ಡಿಕೆಶಿ , ಸಿದ್ದು ದೆಹಲಿಗೆ
- ಧಾರವಾಡ ಬಳಿ ಭೀಕರ ರಸ್ತೆ ಅಪಘಾತ : ಮರಕ್ಕೆ ಕ್ರೂಸರ್ ಡಿಕ್ಕಿ 8 ಮಂದಿ ಸ್ಥಳದಲ್ಲೇ ಸಾವು
- ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ
More Stories
ಕೇಂದ್ರ ಮಂತ್ರಿ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ : ಸಂಪುಟ ರಚನೆ ಬಗ್ಗೆ ಮಾತುಕತೆ ಇಲ್ಲ : ಸಿಎಂ
ಕಾಂಗ್ರೆಸ್ನಲ್ಲೂ ಪರಷತ್ ಟಿಕಟ್ ಗೆ ಜೋರಾಯ್ತು ಗಲಾಟೆ – ಡಿಕೆಶಿ , ಸಿದ್ದು ದೆಹಲಿಗೆ
ಧಾರವಾಡ ಬಳಿ ಭೀಕರ ರಸ್ತೆ ಅಪಘಾತ : ಮರಕ್ಕೆ ಕ್ರೂಸರ್ ಡಿಕ್ಕಿ 8 ಮಂದಿ ಸ್ಥಳದಲ್ಲೇ ಸಾವು