March 29, 2023

Newsnap Kannada

The World at your finger tips!

Yogi Adityanath 770x433 1

ಉತ್ತರ ಪ್ರದೇಶದ ಶಾಲಾ ಬಾಲಕಿಯರಿಗೆ ಕರಾಟೆ ಕಡ್ಡಾಯ – ತರಬೇತಿಗೆ ಆದೇಶ : ಯೋಗಿ ಆದಿತ್ಯನಾಥ್

Spread the love

ರಾಜ್ಯದ ಎಲ್ಲಾ ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದೇಶಿಸಿದ್ದಾರೆ.

ಲೈಂಗಿಕ ಕಿರುಕುಳ,ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಯುಪಿ ಸರ್ಕಾರ ಹೊಸ ನಿರ್ಧಾರ ತಂದಿದೆ. ಪುರುಷರ ಮೇಲೆ ಹೇಗೆ ದಾಳಿ ಮಾಡಬೇಕು. ಈ ಕೃತ್ಯಗಳಿಂದ ತಪ್ಪಿಸಿಕೊಳ್ಳುವುದ ಬಗ್ಗೆ ಬಾಲಕಿಯರಿಗೆ ಕರಾಟೆ ತರಬೇತಿಯನ್ನು ನೀಡಲಾಗುವುದು ಎಂದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.

ಕರಾಟೆ ತರಬೇತಿ ಕಡ್ಡಾಯ

ಮಹಿಳೆಯರ ವಿರುದ್ಧದ ಅಪರಾಧಗಳನ್ನು ತಡೆಯಲು ಯುಪಿ ವಿವಿಧ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರ ಮತ್ತು ಪೊಲೀಸರು ಅದನ್ನು ತೆಗೆದುಕೊಳ್ಳುತ್ತಿದ್ದಾರೆ. ಆದರೆ ಅಪರಾಧಗಳು ಕಡಿಮೆಯಾಗಿಲ್ಲ. ಇದನ್ನು ಅನುಸರಿಸಿ, ಯುಪಿ ಸರ್ಕಾರವು ಅಂತಹ ಅಪರಾಧಗಳನ್ನು ಕಡಿಮೆ ಮಾಡಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಉನ್ನತ ಪೊಲೀಸ್ ಅಧಿಕಾರಿಗಳನ್ನು ಕೇಳಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಳೆದ ಕೆಲವು ವಾರಗಳಿಂದ ತೀವ್ರ ಸಮಾಲೋಚನೆಗಳನ್ನು ನಡೆಸುತ್ತಿದ್ದಾರೆ. ಆ ಸಮಯದಲ್ಲಿ, ವಿದ್ಯಾರ್ಥಿನಿಯರಿಗೆ ಕಡ್ಡಾಯ ಕರಾಟೆ ತರಬೇತಿಯ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಲೈಂಗಿಕ ಅಪರಾಧಗಳು ಹೆಚ್ಚಳ :

ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಬಿಹಾರದಂತಹ ಉತ್ತರದ ರಾಜ್ಯಗಳಲ್ಲಿ ಈ ಘಟನೆಗಳು ವಿಶೇಷವಾಗಿ ಸಾಮಾನ್ಯವಾಗಿದೆ. ಉತ್ತರಪ್ರದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಕೊಲೆ ಮತ್ತು ಬಾಲಕಿಯರ ಮೇಲಿನ ಅತ್ಯಾಚಾರದ ಘಟನೆಗಳು ದೈನಂದಿನ ಘಟನೆಯಾಗಿ ಮಾರ್ಪಟ್ಟಿವೆ. ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಸಹ ಹೆದರುವ ಪರಿಸ್ಥಿತಿಯನ್ನು ಸೃಷ್ಟಿಸಿದೆ. ನಾಳೆ ಮಧ್ಯರಾತ್ರಿ ಉಲ್ಕಾಪಾತ; ಬರಿಗಣ್ಣಿನಲ್ಲಿಯೇ ನೋಡಲು ಅಭ್ಯಂತರವಿಲ್ಲ

ಉತ್ತರ ಪ್ರದೇಶದಲ್ಲಿ ವಿವಿಧ ಬಾಲಕಿಯರ ಶಾಲೆಗಳಲ್ಲಿ ಕಡ್ಡಾಯ ಕರಾಟೆ ತರಬೇತಿ ನೀಡಲಾಗುತ್ತದೆ ಆದರೆ ಆಸಕ್ತಿ ಹೊಂದಿದ ಮಕ್ಕಳಿಗೆ ಮಾತ್ರ ಸೇರಲು ಅವಕಾಶ ನೀಡಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ.

error: Content is protected !!