ಮರಾಠ ಅಭಿವೃದ್ಧಿ ನಿಗಮ ರಚಿಸಿದ ರಾಜ್ಯ ಸರ್ಕಾರ ಕ್ರಮ ಖಂಡಿಸಿ ಕನ್ನಡ ಪರ ಸಂಘಟನೆಗಳು ಶನಿವಾರ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಬಂದ್ ವಿಫಲವಾಯಿತು. ನಿರಂತರವಾಗಿ ಪ್ರತಿಭಟನೆ ಗಳು ಮುಂದುವರೆದಿವೆ.
ಬಸ್ ಸಂಚಾರ , ಸರ್ಕಾರಿ ಕಾರ್ಯಾಲಯಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಅಂಗಡಿ ಮುಂಗಟ್ಟುಗಳು ತೆರೆದಿವೆ.
ಪ್ರಮುಖ ಘಟನಾವಳಿಗಳು
- ಬೆಂಗಳೂರಿನಲ್ಲಿ ಬಂದ್ ಕಾವು. ಆದರೆ ಜನ ಜೀವನ ಎಂದಿನಂತೆ.ಬೆಳಿಗ್ಗೆ 6 ಗಂಟೆ ಯಿಂದ ಆರಂಭವಾದ ಬಂದ್ ನಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗಿಲ್ಲ.
- ಬೆಂಗಳೂರಿನಲ್ಲಿ ಒಂದು ಕಡೆ ಮಾತ್ರ ಕಿಡಿಗೇಡಿಗಳು ಬಸ್ ಕಲ್ಲು ತೋರಿದ್ದಾರೆ. ಬಸ್ ನ ಗ್ಲಾಸ್ ಪುಡಿಪುಡಿಯಾಗಿದೆ.
- ಸಂಘಟನೆಗಳ ನಾಯಕರು, ಸಾವಿರಾರು ಚಳವಳಿಗಾರರನ್ನು ಬಂಧಿಸಿದ ಪೋಲಿಸರು ಬಂಧಿಸಿದ್ದಾರೆ.
- ರಾಜ್ಯ ಸರ್ಕಾರ ಹಾಗೂ ಸಿಎಂ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು. ಅನೇಕ ಜಿಲ್ಲಾ ಕೇಂದ್ರಗಳಲ್ಲೂ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
- ಮುಖ್ಯಮಂತ್ರಿಗಳ ನಿವಾಸದ ತನಕ ಪ್ರತಿಭಟನಾ ಜಾಥಾ . ಕೃಷ್ಣಾ,ಕಾವೇರಿ ನಿವಾಸಕ್ಕೆ ಬಿಗಿ ಭದ್ರತೆ ಮಾಡಲಾಗಿದೆ.
- ಸರ್ಕಾರಿ ಕಚೇರಿಗಳಲ್ಲಿ ಬಸ್ ರೈಲು ಹಾಗೂ ಖಾಸಗಿ ಬಸ್ ಗಳ ಸಂಚಾರ ಎಂದಿನಂತೆ ಸಾಗಿದೆ.
- ಜಿಲ್ಲಾ ಕೇಂದ್ರ ಗಳಲ್ಲಿ ಬಂದ್ ಗೆ ಯಾವುದೇ ಬೆಂಬಲ ಇಲ್ಲ.ಆದರೆ ಕನ್ನಡ ನ ಸಂಘಟನೆ ಗಳು , ಚಳುವಳಿಗಾರರು ಮಾತ್ರ ಪ್ರಮುಖ ರಸ್ತೆ ಗಳಲ್ಲಿ ಪ್ರತಿಭಟನೆಯ ಹಾದಿ ತುಳಿದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಗೆ ಬಂದ ಎಮ್ಮೆ
ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ
ಎಮ್ಮೆಗೆ ಸಿಎಂ ಬಿಎಸ್ವೈ ಪೋಟೋ ಹಾಕಿ ಸರ್ಕಾರದ ವಿರುದ್ಧ ಆಕ್ರೋಶ ಅಷ್ಟಾಗಿ ಸ್ಪಂದನೆ ಸಿಕ್ಕಿಲ್ಲ.
ಮಂಡ್ಯದ ಸಂಜಯ ವೃತ್ತದಲ್ಲಿ ಚಳವಳಿ ಕಾರರು ವಿನೂತನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರಿಂದವಎಮ್ಮೆಗೆ ಸಿಎಂ ಬಿಎಸ್ವೈ ಪೋಟೋ ಹಾಕಿ ಸರ್ಕಾರದ ವಿರುದ್ಧ ಸಿಡಿದೆದ್ದರು.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ