February 27, 2026

Newsnap Kannada

The World at your finger tips!

vatal

ಜ. 22ರ ಕರ್ನಾಟಕ ಬಂದ್ ಮುಂದೂಡಿಕೆ: ಕನ್ನಡ ಸಂಘಟನೆಗಳ ಒಕ್ಕೂಟದ ನಿರ್ಧಾರ

Spread the love

ಸದ್ಯಕ್ಕೆ ಕರ್ನಾಟಕ ಬಂದ್ ಮುಂದೂಡಿದ್ದೇವೆ. ಲಾಕ್‍ಡೌನ್ ಇಲ್ಲದಿದ್ದರೆ ಜನವರಿ 22ಕ್ಕೆ ದೊಡ್ಡ ಮಟ್ಟದ ಹೋರಾಟ ಮಾಡಲು ತೀರ್ಮಾನಿಸಲಾಗಿತ್ತು. ಇಂದಿನ ಕನ್ನಡ ಸಂಘಟನೆಗಳ ಸಭೆಯ ನಿರ್ಣಯದಂತೆ ಬಂದ್ ಬದಲು ಮೆರವಣಿಗೆ ಮಾಡುತ್ತೇವೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ರಾಜ್ಯ ಬಂದ್ ಹಿಂಪಡೆದ ಬಳಿಕ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ಮಾಡಲು ಕನ್ನಡ ಪರ ಹೋರಾಟಗಾರರ ಸಭೆ ಕರೆಯಲಾಗಿತ್ತು.

ಕನ್ನಡ ಒಕ್ಕೂಟದ ರಾಜ್ಯಾದ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವುಡ್‍ಲ್ಯಾಂಡ್ಸ್ ಹೊಟೇಲ್‍ನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಾಟಳ್ ನಾಗರಾಜ್ ಮಾತನಾಡಿ, ಕೊರೊನಾ ಮತ್ತು ಸರ್ಕಾರದ ಟಫ್ ರೂಲ್ಸ್ ಜಾರಿ ಹಿನ್ನೆಲೆ, ಜ.22 ರಂದು ಕರೆ ನೀಡಿದ್ದ ರಾಜ್ಯ ಬಂದ್ ಹಿಂಪಡೆದಿದ್ದೇವೆ. ಮುಂದಿನ ದಿನದಲ್ಲಿ ಲಾಕ್ ಡೌನ್ ಇಲ್ಲದಿದ್ದರೆ ಜ. 22 ರಂದೇ ಬೆಂಗಳೂರಲ್ಲಿ ಹಿಂದೆಂದು ನಡೆಯದ ರೀತಿಯಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ ಎಂದರು.

error: Content is protected !!