ಭ್ರಷ್ಟಾಚಾರಕ್ಕೆ ಮೊದಲ ತಲೆದಂಡ- ಕೆಎಎಸ್ ಅಧಿಕಾರಿ ಎಲಿಷಾ ಆಂಡ್ರೂಸ್ ಅಮಾನತ್ತು

Team Newsnap
1 Min Read

ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹಿರಿಯ ಕೆಎಎಸ್ ಅಧಿಕಾರಿಯನ್ನು ರಾಜ್ಯ ಸರ್ಕಾರ ಅಮಾನತ್ತು ಮಾಡಿದೆ.

ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿ ಎಲಿಷಾ ಆಂಡ್ರೂಸ್ ಅವರನ್ನು ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ.

ನಗರಾಭಿವೃದ್ಧಿ ಇಲಾಖೆಯಲ್ಲಿ ಉಪಕಾರ್ಯದರ್ಶಿ-3 ಹುದ್ದೆಯಲ್ಲಿ ಎಲಿಷಾ ಕಾರ್ಯನಿರ್ವಹಿಸುತ್ತಿದ್ದರು.
ಬಿಬಿಎಂಪಿ ಇಂಜಿನಿಯರ್‌ಗಳ ಪದೋನ್ನತಿಗೆ ಸಂಬಂಧಿಸಿದಂತೆ ಇಂಜಿನಿಯರ್‌ಗಳಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೇ ಕಡತ ವಿಲೇವಾರಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪವನ್ನು ಎಲಿಷಾ ಆಂಡ್ರೂಸ್ ಎದುರಿಸುತ್ತಿದ್ದಾರೆ.

ಈ ಅಧಿಕಾರಿ ವಿರುದ್ದ ದೂರು ಬಂದ ಹಿನ್ನೆಲೆಯಲ್ಲಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತನಿಖೆಗೆ ಆದೇಶಿಸಿದ್ದರು.

ಮೇಲ್ನೋಟಕ್ಕೆ ಆರೋಪ ನಿಜವೆಂದು ಕಂಡ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಜರುಗಿಸಿದೆ. ಅಲ್ಲದೇ ಅಧಿಕಾರಿ ತಮ್ಮ ಮೇಲಿನ ಆರೋಪ ನಿರಾಕರಿಸಿಲ್ಲ ಎಂದು ಸರ್ಕಾರ ತಿಳಿಸಿದೆ.

ಅಮಾನತ್ತಾಗಿರುವ ಈ ಎಲಿಷಾ ಆಂಡ್ರೂಸ್ ರಾಜ್ಯ ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿದ್ದಾರೆ. ಶೇ 40 ರಷ್ಟು ಭ್ರಷ್ಟಾಚಾರ ಆರೋಪಗಳ ನಡುವೆ ಸರ್ಕಾರ ಹಿರಿಯ ಅಧಿಕಾರಿಯ ತಲೆ ದಂಡ ಮಾಡಿರುವುದು ಮಹತ್ವ ಪಡೆದಿದೆ.

Share This Article
Leave a comment