ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹಿರಿಯ ಕೆಎಎಸ್ ಅಧಿಕಾರಿಯನ್ನು ರಾಜ್ಯ ಸರ್ಕಾರ ಅಮಾನತ್ತು ಮಾಡಿದೆ.
ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿ ಎಲಿಷಾ ಆಂಡ್ರೂಸ್ ಅವರನ್ನು ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ.
ನಗರಾಭಿವೃದ್ಧಿ ಇಲಾಖೆಯಲ್ಲಿ ಉಪಕಾರ್ಯದರ್ಶಿ-3 ಹುದ್ದೆಯಲ್ಲಿ ಎಲಿಷಾ ಕಾರ್ಯನಿರ್ವಹಿಸುತ್ತಿದ್ದರು.
ಬಿಬಿಎಂಪಿ ಇಂಜಿನಿಯರ್ಗಳ ಪದೋನ್ನತಿಗೆ ಸಂಬಂಧಿಸಿದಂತೆ ಇಂಜಿನಿಯರ್ಗಳಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೇ ಕಡತ ವಿಲೇವಾರಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪವನ್ನು ಎಲಿಷಾ ಆಂಡ್ರೂಸ್ ಎದುರಿಸುತ್ತಿದ್ದಾರೆ.
ಈ ಅಧಿಕಾರಿ ವಿರುದ್ದ ದೂರು ಬಂದ ಹಿನ್ನೆಲೆಯಲ್ಲಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತನಿಖೆಗೆ ಆದೇಶಿಸಿದ್ದರು.
ಮೇಲ್ನೋಟಕ್ಕೆ ಆರೋಪ ನಿಜವೆಂದು ಕಂಡ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಜರುಗಿಸಿದೆ. ಅಲ್ಲದೇ ಅಧಿಕಾರಿ ತಮ್ಮ ಮೇಲಿನ ಆರೋಪ ನಿರಾಕರಿಸಿಲ್ಲ ಎಂದು ಸರ್ಕಾರ ತಿಳಿಸಿದೆ.
ಅಮಾನತ್ತಾಗಿರುವ ಈ ಎಲಿಷಾ ಆಂಡ್ರೂಸ್ ರಾಜ್ಯ ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿದ್ದಾರೆ. ಶೇ 40 ರಷ್ಟು ಭ್ರಷ್ಟಾಚಾರ ಆರೋಪಗಳ ನಡುವೆ ಸರ್ಕಾರ ಹಿರಿಯ ಅಧಿಕಾರಿಯ ತಲೆ ದಂಡ ಮಾಡಿರುವುದು ಮಹತ್ವ ಪಡೆದಿದೆ.
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
This website uses cookies.
Leave a Comment