5 ಲಕ್ಷ ರು ಲಂಚ ಪಡೆಯುವ ಮುನ್ನ ಮಹಿಳಾ ಕೆಎಎಸ್ ಅಧಿಕಾರಿ ವರ್ಷಾ ಬೆಂಗಳೂರಿನ ಕಂದಾಯ ಭವನದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಗಳವಾರ ಬೆಂಗಳೂರಿನ ಕಂದಾಯ ಭವನದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ. ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ 5 ಲಕ್ಷ ರು ಲಂಚ ಸ್ವೀಕಾರ ಮಾಡುವಾಗ ಈ ದಾಳಿ ನಡೆದಿದೆ.ತೆಲುಗು ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ : ತಾಯಿ, ಅಣ್ಣ ಕಳೆದುಕೊಂಡಿದ್ದ ನಟನಿಗೆ ಆಘಾತ.
ಖಾತೆ ಮಾಡಿ ಕೊಡಲು ವರ್ಷಾ ವಡೆಯರ್ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಮಂಗಳವಾರ ಲಂಚ ಸ್ವೀಕಾರ ಮಾಡುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ, ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವರ್ಗಾವಣೆ ವಿವಾದ ವರ್ಷಾ ಒಡೆಯರ್ ಈ ಮೊದಲು ರಾಮನಗರ ಜಿಲ್ಲೆಯ ಕನಕಪುರ ತಹಶೀಲ್ದಾರ್ ಆಗಿದ್ದರು. ಆಗ ಅವರನ್ನು ವರ್ಗಾವಣೆ ಮಾಡಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು. ಹಲವಾರು ಸಂಘಟನೆಗಳು ಅವರ ಪರವಾಗಿ ನಿಂತು ಬೆಂಬಲ ನೀಡಿದ್ದವು, ಸಾಮಾಜಿಕ ಜಾಲತಾಣದಲ್ಲಿಯೂ ಅವರನ್ನು ಬೆಂಬಲಿಸಿ ಅಭಿಯಾನ ನಡೆದಿತ್ತು.
- ಬೆಳ್ಳೂರು ಸಮೀಪ ಸಾರಿಗೆ ಬಸ್ ಗೆ ಕಾರು ಢಿಕ್ಕಿ : ನಾಲ್ವರ ಸಾವು
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ