ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟಿ ಪತಿ ಜಾಫರ್ ಫಿರ್ಜಾದೆ (39) ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರೇಷ್ಮಾ ಹಿಡಕಲ್ ಡ್ಯಾಂ ಭೂ ಸ್ವಾಧೀನಾಧಿಕಾರಿಯಾಗಿ ರುವ ರೇಷ್ಮಾ ತಾಳಿಕೋಟಿ ಅವರು ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಪತಿ ಜಾಫರ್ ಫಿರ್ಜಾದೆ ಅವರು ಬೆಳಗಾವಿಯ ಆಜಂ ನಗರದಲ್ಲಿರುವ ತಮ್ಮ ಸಹೋದರನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ರೇಷ್ಮಾ ತಾಳಿಕೋಟಿ ಈ ಹಿಂದೆ ಹುಕ್ಕೇರಿ, ಖಾನಾಪುರ ಸೇರಿದಂತೆ ವಿವಿಧೆಡೆ ತಹಸಿಲ್ದಾರರಾಗಿ ಕಾರ್ಯನಿರ್ವಹಿಸಿದ್ದರು. ಪತಿ ಜಾಫರ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಎಫ್ ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಜಾಫರ್ ಫಿರ್ಜಾದೆ ಇಂದು ಆಜಂ ನಗರದಲ್ಲಿರುವ ತಮ್ಮ ಸಹೋದರ ಆಸಿಫ್ ಅವರ ಮನೆಗೆ ತೆರಳಿ ಅಲ್ಲಿಯೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಾಫರ್ ಅವರು ಕಳೆದ ಕೆಲವು ತಿಂಗಳಿನಿಂದ ಡಿಪ್ರೆಶನ್ ಗೆ ಒಳಗಾಗಿದ್ದರು ಎನ್ನುವ ಮಾಹಿತಿ ಇದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಶೇಖರ್ ಅವರು ಮಾಹಿತಿ ನೀಡಿದ್ದಾರೆ.
More Stories
ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು
ಒರಿಸ್ಸಾ : ರೈಲು ಅಪಘಾತ – 50 ಜನರ ಸಾವು, 179 ಮಂದಿಗೆ ಗಾಯ
ಮದ್ದೂರು ಸಹೋದರಿಯ ಮನೆಗೆ ಭೇಟಿ ನೀಡಿ , ಆತ್ಮಹತ್ಯೆ ಮಾಡಿಕೊಂಡ ವೈದ್ಯ