Karnataka

ಆ. 27ರಂದು KAS ಪೂರ್ವಭಾವಿ ಪರೀಕ್ಷೆ : ಅಭ್ಯರ್ಥಿಗಳು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು

ಬೆಂಗಳೂರು: ಆಗಸ್ಟ್ 27 ರಂದು ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ನಡೆಯಲಿದೆ.

ಆಗಸ್ಟ್ 27 ರಂದು ಬೆಳಗ್ಗೆ 10 ರಿಂದ 12 ಗಂಟೆಯವರೆಗೆ ಪತ್ರಿಕೆ -1, ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ಪತ್ರಿಕೆ -2ರ ಪರೀಕ್ಷೆ ನಡೆಯಲಿದೆ.

ಪರೀಕ್ಷೆ ನಡೆಯುವ 214 ಸರ್ಕಾರಿ, 189 ಅನುದಾನಿತ, 161 ಖಾಸಗಿ ಶಾಲಾ, ಕಾಲೇಜುಗಳು ಸೇರಿದಂತೆ 564 ಪರೀಕ್ಷಾ ಉಪ ಕೇಂದ್ರಗಳಿಗೆ ವಿಶೇಷ ರಜೆ ನೀಡಲಾಗಿದೆ.ಮುಡಾ ಹಗರಣ – ಚಾಮುಂಡಿ ಬೆಟ್ಟದ ಅಂಗಡಿ ಬಂದ್ ಮಾಡಿಸಿದ ಪ್ರತಿಭಟನಾಕಾರರು

ಅಭ್ಯರ್ಥಿಗಳು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು :

  • ಕೆಪಿಎಸ್ಸಿ ವೆಬ್ಸೈಟ್ನಲ್ಲಿ ಹಾಲ್ ಟಿಕೆಟ್ ಲಭ್ಯವಿದ್ದು, ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಳ್ಳಬಹುದು.
  • ಅಭ್ಯರ್ಥಿಗಳು ತುಂಬು ತೋಳಿನ ಶರ್ಟ್ ಧರಿಸುವ ಹಾಗಿಲ್ಲ. ಅರ್ಧ ತೋಳಿನ ಶರ್ಟ್ ಧರಿಸಬೇಕು. ಸರಳ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವುದು.ವಿವಿಧ ರೀತಿಯ ವಿನ್ಯಾಸವುಳ್ಳ ವಸ್ತ್ರಗಳನ್ನು ಧರಿಸುವಂತಿಲ್ಲ.
  • ಯಾವುದೇ ರೀತಿಯ ಆಭರಣಗಳನ್ನುಧರಿಸುವಂತಿಲ್ಲ (ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ). ಶೂ ಮತ್ತು ಸಾಕ್ಸ್ ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಚಪ್ಪಲಿಗಳನ್ನು ಧರಿಸಿ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
  • ಕಡ್ಡಾಯವಾಗಿ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ರಬೇಕು ಹಾಗೂ ಜೊತೆಗೆ ಬ್ಲಾಕ್ ಬಾಲ್ ಪಾಯಿಂಟ್ ಪೆನ್ನನ್ನು ತರತಕ್ಕದ್ದು.
  • ಒಎಂಆರ್ ಉತ್ತರ ಹಾಳೆಯಲ್ಲಿನ ಎಲ್ಲಾ ನಮೂದು (Marking) ಗಳನ್ನು ಕಪ್ಪು ಬಾಲ್ ಪಾಯಿಂಟ್ ಪೆನ್ನಿನಿಂದ ಮಾತ್ರ ಮಾಡತಕ್ಕದ್ದು.
  • ಪರೀಕ್ಷೆಯ ಪ್ರವೇಶ ಪತ್ರ ದ ಜೊತೆಗೆ ಆಧಾರ್ ಕಾರ್ಡ್ ಅಥವಾ ಯಾವುದಾದರೂ ಒಂದು ಐಡಿ ಪ್ರೂಫ್ ತರಬೇಕು.ಅಂಗವಿಕಲ ಅಭ್ಯರ್ಥಿಗಳು ನಿಗದಿತ ಅಂಗವಿಕಲ ಪ್ರಮಾಣ ಪತ್ರಗಳನ್ನು ತರಬೇಕು.
  • ಚೀಟಿಯ ಪ್ರತಿ ಪ್ರವೇಶಪತ್ರದ ಪ್ರತಿ ಹಾಗೂ ಪಾಸ್ಪೋರ್ಟ್/ ಸ್ಟ್ಯಾಂಪ್‌ಅಳತೆಯ 2 ಭಾವಚಿತ್ರಗಳನ್ನು ಕಡ್ಡಾಯವಾಗಿ ಸಂವೀಕ್ಷಕರಿಗೆ ನೀಡಿ ಒಂದು ಭಾವಚಿತ್ರವನ್ನು ನಾಮಿನಲ್ ರೋಲ್ ನಲ್ಲಿನ ನಿಗದಿತ ಅಂಕಣದಲ್ಲಿ ಮತ್ತು ಇನ್ನೊಂದು ಭಾವಚಿತ್ರವನ್ನು ಈ ಸಂಬಂಧ ಸಲ್ಲಿಸುವ ಮುಚ್ಚಳಿಕೆ ಪತ್ರದಲ್ಲಿ ಅಂಟಿಸಿ ದೃಢೀಕರಿಸುವುದು.
Team Newsnap
Leave a Comment

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024