ಬೆಂಗಳೂರು: : ಕಾಶಿಯಾತ್ರೆಗೆ ನೀಡಲಾಗುತ್ತಿರುವ ಸಬ್ಸಿಡಿ ದರವನ್ನು 5 ಸಾವಿರ ರೂ.ಗಳಿಂದ 7,500 ರೂ.ಗಳಿಗೆ ಹೆಚ್ಚಿಸಲಾಗಿದೆ.
ಮುಂದಿನ ದಿನಗಳಲ್ಲಿ ರಾಜ್ಯದ ಸಾಮಾನ್ಯ ಭಕ್ತರಿಗೂ ಯಾತ್ರೆಗೆ ತೆರಳಲು ಅವಕಾಶ ನೀಡಲಾಗುವುದು ಅಂತ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ರಿಯಾಯಿತಿ ದರದ ‘ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ’ ಯೋಜನೆಯಡಿ ಬೆಂಗಳೂರಿನಿಂದ 450 ಪ್ರಯಾಣಿಕರನ್ನು ಹೊತ್ತ ವಿಶೇಷ ರೈಲು ನಗರದ ಯಶವಂತಪುರ ರೈಲ್ವೆ ನಿಲ್ದಾಣದಿಂದ ಶನಿವಾರ ತೆರಳಿತು.
ಈ ರೈಲಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವರು, “ಕಾಶಿಯಾತ್ರೆಯ ಸಹಾಯಧನ ಹೆಚ್ಚಿಸುವ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.
ಮುಂದಿನ ಟ್ರಿಪ್ ಆ.12ಕ್ಕೆ ಹೊರಡಲಿದೆ. ರಾಮೇಶ್ವರಂ, ಗಯಾ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅನುವು ಮಾಡಿಕೊಡಲಾಗುವುದು ಅಂತ ಇದೇ ವೇಳೇ ತಿಳಿಸಿದರು.SSCಯಿಂದ 1342 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಒಟ್ಟು ಎಂಟು ದಿನಗಳ ಯಾತ್ರೆಯಲ್ಲಿ ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್ ರಾಜ್ ಕ್ಷೇತ್ರಗಳಿಗೆ ತೆರಳಲು ರಾಜ್ಯ ಸರಕಾರವು ಐಆರ್ಸಿಟಿಸಿ ಮತ್ತು ಭಾರತೀಯ ರೈಲ್ವೆ ಇಲಾಖೆ ಸಹಯೋಗದೊಂದಿಗೆ ವಿಶೇಷ ರೈಲಿನ ಮೂಲಕ 2022-23ನೇ ಸಾಲಿನಿಂದ ಈ ಯೋಜನೆ ಕೈಗೊಂಡಿದೆ. ಈ ವಿಶೇಷ ರೈಲಿನಲ್ಲಿಅಡುಗೆ ಮನೆ, ವೈದ್ಯರ ತಂಡ ಇರಲಿದ್ದು ಪ್ರತಿ ಬೋಗಿಯಲ್ಲಿಸಿಸಿ ಕ್ಯಾಮರಾಗಳ ವ್ಯವಸ್ಥೆ ಇದೆ. 100 ಮಂದಿ ರೈಲ್ವೆ ಸಿಬ್ಬಂದಿಗಳು ಇರುತ್ತಾರೆ. ಇವರಿಗಾಗಿಯೇ ಪ್ರತ್ಯೇಕ ಬೋಗಿ ವ್ಯವಸ್ಥೆ ಇದೆ.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು