ಸ್ಯಾಂಡಲ್ ವುಡ್ ನಟಿ ಶಾನ್ವಿ ಶ್ರೀವಾಸ್ತವ ಇತ್ತೀಚಿಗೆ ಕಸ್ತೂರಿ ಮಹಲ್ ಸಿನಿಮಾ ಒಪ್ಪಿಕೊಂಡಿದ್ದರು. ನಟಿ ರಚಿತಾ ರಾಮ್ ಹೊರಬಂದ ಜಾಗಕ್ಕೆ ಶಾನ್ವಿ ಎಂಟ್ರಿ ಕೊಟ್ಟಿದ್ದರು. ವಿಶೇಷ ಎಂದರೆ ಈಗಾಗಲೇ ಸಿನಿಮಾದ ಚಿತ್ರೀಕರಣ ಮಾಡಿ ಮುಗಿಸಿದ್ದಾರೆ. ಅಂದ್ಹಾಗೆ ನಿರ್ದೇಶಕ ದಿನೇಶ್ ಬಾಬು ಅವರ 50ನೇ ಸಿನಿಮಾವಿದು. ಅಕ್ಟೋಬರ್ ಮೊದಲ ವಾರದಲ್ಲಿ ಚಿತ್ರೀಕರಣ ಪ್ರಾರಂಭಮಾಡಿದ್ದ ಚಿತ್ರತಂಡ ಈಗಾಗಲೇ ಚಿತ್ರೀಕರಣ ಮುಗಿಸಿ ಅಚ್ಚರಿ ಮೂಡಿಸಿದೆ.
ಕಡಿಮೆ ಸಮಯದಲ್ಲಿ ಚಿತ್ರೀಕರಣ ಮುಗಿಸುವುದರಲ್ಲಿ ನಿರ್ದೇಶಕ ದಿನೇಶ್ ಬಾಬು ಎತ್ತಿದ ಕೈ. ಸಾಕಷ್ಟು ಸಿನಿಮಾಗಳನ್ನು ಕಡಿಮೆ ಅವಧಿಯಲ್ಲಿ ಶೂಟಿಂಗ್ ಮುಗಿಸಿ ದಾಖಲೆ ಮಾಡಿದ್ದಾರೆ. ಕಸ್ತೂರಿ ಮಹಲ್ ಸಿನಿಮಾವನ್ನು ಸಹ ಕಡಿಮೆ ಅವಧಿಯಲ್ಲಿ ಶೂಟಿಂಗ್ ಮಾಡಿ ಮುಗಿಸಿದ್ದಾರೆ.
ಈ ತಿಂಗಳ ಪ್ರಾರಂಭದಲ್ಲಿ ಚಿತ್ರತಂಡ ಚಿಕ್ಕಮಗಳೂರಿನ ಕೊಟ್ಟಿಗೆ ಹಾರ, ಬಾಲೂರು ಸುತ್ತಮುತ್ತಲಿನ ಸುಂದರ ಪರಿಸರದಲ್ಲಿ ಆರಂಭವಾಗಿತ್ತು. ಆಯುಧ ಪೂಜೆಯ ಶುಭದಿನದಂದು ಅದೇ ಸ್ಥಳದಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ ಕುಂಬಳಕಾಯಿ ಒಡೆದಿದೆ. ಸುಮಾರು 20 ದಿನಗಳ ಕಾಲ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯಗೊಂಡಿದೆ.
ಈ ಸಿನಿಮಾದಲ್ಲಿ ನಾಯಕನಾಗಿ ಸ್ಕಂಧ ಅಶೋಕ್ ಕಾಣಿಸಿಕೊಳ್ಳುತ್ತಿದ್ದಾರೆ. ರಂಗಾಯಣ ರಘು, ಶ್ರುತಿ ಪ್ರಕಾಶ್, ನೀನಾಸಂ ಅಶ್ವಥ್, ಅಕ್ಷರ್ ಸೇರಿದಂತೆ ಅನೇಕರಿದ್ದಾರೆ. ಸೈಕಲಾಜಿಕಲ್ ಥ್ರಿಲ್ಲಲ್ ಮಾದರಿಯ ಕಸ್ತೂರಿ ಮಹಲ್ ಹೇಗಿರಲಿದೆ ಎನ್ನುವುದು ಸಿನಿಪ್ರೇಕ್ಷಕರ ಕುತೂಹಲ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment