ಇಂದು ಸಂಜೆ ಹುಟ್ಟೂರಿನಲ್ಲಿ ಕತ್ತಿ ಅಂತ್ಯ ಕ್ರಿಯೆ- ಬೆಳಗಾವಿ ಜಿಲ್ಲೆಯಲ್ಲಿ ಶಾಲಾ, ಕಾಲೇಜಿಗೆ ರಜೆ

Team Newsnap
1 Min Read

ಆಹಾರ ಇಲಾಖೆ ಸಚಿವ ಉಮೇಶ್‌ ಕತ್ತಿ ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನರಾದ ಹಿನ್ನೆಲೆಯಲ್ಲಿ ಕತ್ತಿ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಬುಧವಾರ ಬೆಳಗ್ಗೆ ಬೆಳಗಾವಿ ಏರ್ ಲಿಪ್ಟ್ ಮಾಡಿದ ನಂತರ ಬೆಳಗಾವಿಯಿಂದ ಹುಟ್ಟೂರು ಬೆಲ್ಲದ ಬಾಗೇವಾಡಿಗೆ ತೆಗೆದುಕೊಂಡು ಹೋಗಲಾಗುವುದು.

  • ಸಂಕೇಶ್ವರ್ ದ ವಿಶ್ವನಾಥ್ ಸಕ್ಕರೆ ಕಾರ್ಖಾನೆ ಬಯಲಿನಲ್ಲಿ ಮಧ್ಯಾಹ್ನ 2 ಗಂಟೆಯವರಿಗೆ ಅಂತಿಮ ದರ್ಶನಕ್ಕೆ ಇಡಲಾಗುವುದು.
  • ನಂತರ ಹುಟ್ಟರೂ ಬೆಲ್ಲದ ಬಾಗೇವಾಡಿಯಲ್ಲಿ ಕತ್ತಿ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ, 5. ಗಂಟೆಗೆ ಅವರ ತೋಟದ ಮನೆಯಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು.
  • ಸಚಿವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶಾಲೆ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

ಸಚಿವ ಉಮೇಶ್​ ಕತ್ತಿಯವರ ಸ್ವಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಕತ್ತಿಯವರ ಸಾವಿನ ಸುದ್ದಿ ಕೇಳಿ, ಮಧ್ಯರಾತ್ರಿಯೇ ಜನರು ಆಗಮಿಸ್ತಿದ್ದಾರೆ, ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ಶೋಕ ಮಡುಗಟ್ಟಿದೆ.

Share This Article
Leave a comment