Trending

ಕಾವೇರಿ ನೀರು ಹಂಚಿಕೆ: ಸೆ. 1ಕ್ಕೆ ವಿಚಾರಣೆ- ನೀರಿನ ಹಂಚಿಕೆ ವಿಷಯದಲ್ಲಿ ನಾವು ತಜ್ಞರಲ್ಲ : ಕೋರ್ಟ್

ನವದೆಹಲಿ : ಕಾವೇರಿ ನೀರು ಹಂಚಿಕೆ ವಿಚಾರ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಶುಕ್ರವಾರ ಮಹತ್ವದ ವಿಚಾರಣೆ ನಡೆಯಿತು.

ತಮಿಳುನಾಡು ಮತ್ತು ಕರ್ನಾಟಕ ಎರಡೂ ರಾಜ್ಯಗಳ ವಾದವನ್ನು ಆಲಿಸಿದ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ, ಸೆಪ್ಟೆಂಬರ್ 1ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ಸದ್ಯಕ್ಕೆ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಈ ಮೂಲಕ ಸದ್ಯ ವಿವಾದ ಬಗೆಹರಿಸುವುದನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಬಿಟ್ಟಿದೆ. ಸುಪ್ರೀಂ ಕೋರ್ಟ್ ತೀರ್ಮಾನದಿಂದ ತಮಿಳುನಾಡಿಗೆ ನಿರಾಸೆಯಾಗಿದೆ.

ಮುಂದಿನ ಸೋಮವಾರ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯ ತೀರ್ಮಾನ ತುಂಬಾನೇ ಮಹತ್ವ ಪಡೆದುಕೊಂಡಿದೆ.

ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯು ಮುಂದಿನ ಸೋಮವಾರ ನಡೆಯಲಿದೆ. ಮುಂದಿನ 15 ದಿನಗಳ ತನಕ ನೀರು ಹಂಚಿಕೆ ಬಗ್ಗೆ ಈ ಸಭೆಯಲ್ಲಿ ಪರಿಶೀಲಿಸಿ ಸೂಕ್ತ ಆದೇಶವನ್ನು ಆ ಸಮಿತಿ ನೀಡಲಿದೆ. ನಂತರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲನೆ ಆಗಿದೆಯೇ? ಇಲ್ಲವೇ? ಎಂಬುವುದನ್ನು ಗಮನಿಸಲಿದೆ. ಪ್ರಾಧಿಕಾರ ನೀಡಿದ್ದ ಆದೇಶ ರಾಜ್ಯದ ಹಿತಾಸಕ್ತಿಗೆ ವಿರುದ್ಧ ಎಂದು ಕರ್ನಾಟಕ ಹೇಳಿದೆ. ಈ ವಾದವನ್ನು ತಮಿಳುನಾಡು ವಿರೋಧಿಸಿದ್ದು ನೀರಿನ ಪ್ರಮಾಣ ಹೆಚ್ಚಬೇಕು ಎಂದು ಹೇಳಿದೆ. ಹೀಗಾಗಿ ಮುಂದಿನ ಶುಕ್ರವಾರ ನಾವು ಮತ್ತೆ ವಿಚಾರಣೆ ಮಾಡುತ್ತೇವೆ ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ.‘ಗೃಹಲಕ್ಷ್ಮಿ’ ಯೋಜನೆಯ ಹಣ ಪಡೆಯುವ ಭಾಗ್ಯ ಕೆಲವು ಮಹಿಳೆಯರಿಗೆ ಗ್ಯಾರೆಂಟಿ ಇಲ್ಲ

ಎರಡೂ ರಾಜ್ಯಗಳ ವಾದ ಬಳಿಕ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಬಿ.ಆರ್. ಗವಾಯಿ, ಕರ್ನಾಟಕ ನೀರು ಬಿಡುಗಡೆ ಮಾಡಿದ್ದೇವೆ ಎಂದಿದೆ. ಬಿಡುಗಡೆಯಾದ ನೀರು ತಮಿಳುನಾಡು ತಲುಪಲು ಮೂರು ದಿನ ಬೇಕು. ನಾವು ಹೇಗೆ ಆದೇಶ ನೀಡಲು ಸಾಧ್ಯ? ನಾವು ನೀರಿನ ಹಂಚಿಕೆ ವಿಷಯದಲ್ಲಿ ತಜ್ಞರಲ್ಲ. ನೀವು ಪ್ರಾಧಿಕಾರವನ್ನು ಸಂಪರ್ಕಿಸಿ ಎಂದರು.

Team Newsnap
Leave a Comment

Recent Posts

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024

ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ

ಬೆಂಗಳೂರು:ಪೆನ್‍ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More

May 10, 2024

ವಿಚಾರವಾದಿ ದಾಭೋಲ್ಕರ್ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ

ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More

May 10, 2024