ಜೀವನದಿ, ದೈವ ಸ್ವರೂಪಿಣಿ ಕಾವೇರಿ ತಲಕಾವೇರಿಯಲ್ಲಿ ಇಂದು ಮಧ್ಯಾಹ್ನ ತನ್ನ ಭಕ್ತರಿಗೆ ತೀರ್ಥರೂಪಣಿಯಾಗಿ ದರ್ಶನ ಭಾಗ್ಯ ನೀಡಿದ್ದಾಳೆ.
ಭಾಗಮಂಡಲ ತಲಕಾವೇರಿಯಲ್ಲಿ ಮಧ್ಯಾಹ್ನ 1.11ರ ಮಕರ ಲಗ್ನದಲ್ಲಿ ತೀರ್ಥೋದ್ಭವ ಆಗಿದೆ ಭಕ್ತರು ತೀರ್ಥದಲ್ಲಿ ಮಿಂದೆದ್ದು ಪಾವನರಾಗಿದ್ದಾರೆ.
ತೀರ್ಥೋದ್ಭವ ಸಂದರ್ಭದಲ್ಲಿ ಆರು ಅರ್ಚಕರಿಂದ ವಿಶೇಷ ಮಹಾಪೂಜೆ ನಡೆಯಿತು. ಪ್ರಧಾನ ಅರ್ಚಕ ಗುರು ರಾಜಾಚಾರ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಬೆಳಗ್ಗೆಯಿಂದಲೇ ಬ್ರಹ್ಮ ಕುಂಡಿಕಗೆ ನಿತ್ಯಪೂಜೆ, ಕುಂಕುಮಾರ್ಚನೆ, ಮಹಾ ಆರತಿ ಸೇರಿದಂತೆ ವಿವಿಧ ಪೂಜಾ ಕೈಂಕಾರ್ಯಗಳು ಜರುಗಿದವು.
ಕಳೆದ ವರ್ಷ ಅಕ್ಟೋಬರ್ 18 ರ ಮಧ್ಯರಾತ್ರಿ 12.57ಕ್ಕೆ ಕರ್ಕಾಟಕ ಲಗ್ನದಲ್ಲಿ ಭಕ್ತರ ನಂಬಿಕೆಯ ಕಾವೇರಿ ತೀರ್ಥೋದ್ಭವವಾಗಿತ್ತು. ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಇದೆ.
ಭದ್ರತೆ ನಿಯೋಜನೆ:
ಕೋವಿಡ್ ಹಿನ್ನೆಲೆ ಈ ಭಾರೀ ಹಲವು ನಿರ್ಬಂಧ ಹೇರಲಾಗಿದೆ. ತೀರ್ಥೋದ್ಭವದ ಸಂದರ್ಭ ಕೊಳಕ್ಕೆ ಇಳಿದು ಪುಣ್ಯ ಸ್ನಾನ ಮಾಡಲು ಅವಕಾಶ ನೀಡಿಲ್ಲ.
ಜೊತೆಗೆ ಭಕ್ತರಿಗೆ ತೀರ್ಥ ವಿತರಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಇಂದಿನಿಂದ ತಲಕಾವೇರಿಯಲ್ಲಿ ಒಂದು ತಿಂಗಳ ಜಾತ್ರೋತ್ಸವ ನಡೆಯಲಿದೆ.
ತಲಕಾವೇರಿ, ಭಾಗಮಂಡಲದಲ್ಲಿ ಭದ್ರತೆಗೆ ಪೊಲೀಸರ ಭಾರಿ ಸಪ೯ಗಾವಲು ಹಾಕಲಾಗಿತ್ತು.
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
This website uses cookies.
Leave a Comment