Politics

ರಾಷ್ಟ್ರ ರಾಜಕಾರಣದತ್ತ ಹೆಜ್ಜೆ ಹಾಕಿದ KCR : ‘ಭಾರತ್ ರಾಷ್ಟ್ರ ಸಮಿತಿ’ ಹೊಸ ಪಕ್ಷ

2024ರ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ರಾಷ್ಟ್ರೀಯ ಪಕ್ಷವನ್ನು ಸ್ಥಾಪನೆ ಮಾಡಿದ್ದಾರೆ.

ಇಂದು ಮಧ್ಯಾಹ್ನ 1.19ಕ್ಕೆ ತಮ್ಮ ಹೊಸ ಪಕ್ಷಕ್ಕೆ ‘ಭಾರತ್ ರಾಷ್ಟ್ರ ಸಮಿತಿ’ ( Bharath Rashtra Samithi )ಎಂದು ನಾಮಕರಣ ಮಾಡಿ ಘೋಷಿಸಿದ್ದಾರೆ.ಇದನ್ನು ಓದಿ –ಮಂಡ್ಯ ಮಹಾ ಕುಂಭಮೇಳಕ್ಕೆ ಅಕ್ಟೋಬರ್ 6 ರಿಂದ 14 ರವರೆಗೆ ಮಹದೇಶ್ವರ ಜ್ಯೋತಿ ಯಾತ್ರೆ 

‘ತೆಲಂಗಾಣ ಭವನ’ದಲ್ಲಿ ನಡೆದ ಕಾರ್ಯಕ್ರಮದಲ್ಲಿ ತೆಲಂಗಾಣ ( Telangana ) ರಾಷ್ಟ್ರ ಸಮಿತಿ ನಾಯಕರು, ಜೆಡಿಎಸ್ ( JDS ) ನಾಯಕರು ಹಾಗೂ ತೃತೀಯರ ರಂಗ ಬೆಂಬಲಿತರು ಭಾಗಿಯಾಗಿದ್ದರು. ಈ ಮೂಲಕ ದೇಶದಲ್ಲಿ ತೆಲಂಗಾಣ ಸಿಎಂ ಕೆಸಿಆರ್‌ ( KSR ) ಹೊಸ ಪಕ್ಷ ಕಟ್ಟುವ ಕನಸು ಇವತ್ತು ಸಾಕಾರಗೊಂಡಿದೆ.

ಮುಂದಿನ ಚುನಾವಣೆಗಳನ್ನು ( Elections ) ಗಮನದಲ್ಲಿಟ್ಟುಕೊಂಡು ಪ್ರಾದೇಶಿಕ ಪಕ್ಷಗಳು ಒಗ್ಗಟ್ಟಿನ ಸಮರ ಸಾರಲು ಕೆಸಿಆರ್‌ ಹೊಸಪಡೆಯನ್ನ ಕಟ್ಟಿದ್ದಾರೆ. ಓಡುವ ಕುದುರೆ ಎನ್‌ಡಿಎಗೆ ಲಗಾಮು ಹಾಕಲು, ಕುಗ್ಗುತ್ತಿರುವ ಕಾಂಗ್ರೆಸ್‌ನ ನೆಲಕಚ್ಚಿಸಲು ಕೆಸಿಆರ್‌ರ ಹೊಸ ಪಕ್ಷ ಇವತ್ತು ಉದಯವಾಗಿದೆ.

2024ಕ್ಕೆ ನರೇಂದ್ರ ಮೋದಿ ( Narendra Modi ) ಎನ್‌ಡಿಎ ಸರ್ಕಾರದ 5 ವರ್ಷದ ಅವಧಿ ಮಕ್ತಾಯವಾಗಲಿದೆ. ದೇಶದಲ್ಲಿ ಮತ್ತೆ ಲೋಕಸಭೆ ಚುನಾವಣೆ ನಡೆಯಲಿದೆ. ಹೀಗಾಗಿ ರಾಷ್ಟ್ರ ರಾಜಕೀಯದಲ್ಲಿ ( Politics ) ತೃತೀಯ ರಂಗ ತಲೆ ಎತ್ತುವ ಎಲ್ಲಾ ಚರ್ಚೆಗಳು ಆರಂಭವಾಗಿವೆ.

ಅದರಲ್ಲೂ ದೇಶದಲ್ಲಿ ಬಿಜೆಪಿಯ ( BJP )ನಾಗಾಲೋಟಕ್ಕೆ ಬ್ರೇಕ್‌ ಹಾಕಲು ತೆಲಂಗಾಣ ಸಿಎಂ ( CM ) ಹೊಸ ಪಕ್ಷ ಹುಟ್ಟುಹಾಕಲು ಸಿದ್ಧರಾಗಿದ್ದಾರೆ. ಈ ಮೂಲಕ ಕೆ. ಚಂದ್ರಶೇಖರ್ ರಾವ್ ( K Chandrashekar Rao )ಪ್ರಧಾನಿ ಹುದ್ದೆಯ ಕನಸನ್ನು ಹಿಂಬಾಲಿಸುತ್ತಿದ್ದಾರೆ.

Team Newsnap
Leave a Comment

Recent Posts

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ

ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More

April 27, 2024