-ದೆಹಲಿಯಲ್ಲಿ ಬಿಜೆಪಿ ಭರ್ಜರಿ ಗೆಲುವು
ಆ ವೇಳೆಯಲ್ಲಿ ಕೇಜ್ರಿವಾಲ್ ಅವರು, “ಬಿಜೆಪಿಯ ಉದ್ದೇಶ ನಮ್ಮ ಸರ್ಕಾರವನ್ನು ಪತನಗೊಳಿಸುವುದಾಗಿದೆ. ನರೇಂದ್ರ ಮೋದಿಜಿ ದೆಹಲಿಯಲ್ಲಿ ಸರ್ಕಾರ ರಚಿಸಲು ಬಯಸುತ್ತಾರೆ. ಆದರೆ ಚುನಾವಣೆಯ ಮೂಲಕ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂಬುದು ಅವರಿಗೆ ತಿಳಿದಿದೆ. ಮೋದಿಜಿಗೆ ದೆಹಲಿಯಲ್ಲಿ ನಮ್ಮನ್ನು ಸೋಲಿಸಲು ಇನ್ನೊಂದು ಜನ್ಮ ಬೇಕು” ಎಂದಿದ್ದರು.
ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ತೀವ್ರ ಪೈಪೋಟಿಯ ಬಳಿಕ ದೆಹಲಿಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, 27 ವರ್ಷಗಳ ನಂತರ ದೆಹಲಿಯಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ. ಎಎಪಿಯ ಹ್ಯಾಟ್ರಿಕ್ ಗೆಲುವಿನ ಕನಸು ಭಗ್ನವಾಗಿದ್ದು, ಕೇಜ್ರಿವಾಲ್ ಅವರ ಸೋಲಿನ ಬಳಿಕ ಪಕ್ಷ ಕಚೇರಿಯಲ್ಲಿ ಮೌನ ಮಡುಗಟ್ಟಿದೆ.ಇದನ್ನು ಓದಿ –ತೋರಿಕೆಯ ‘ಅಟೆಂಡೆನ್ಸ್’ ಬದಲು ಆತ್ಮೀಯತೆಯ “ಪ್ರೆಸೆನ್ಸ್” ಇರಲಿ……
ಕೇಜ್ರಿವಾಲ್ ಅವರು ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು, ಆದರೆ ಅವರ ವಿರುದ್ಧ ಬಿಜೆಪಿಯ ಪರ್ವೇಶ್ ವರ್ಮಾ 1,800 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಫಲಿತಾಂಶದಿಂದ ಬಿಜೆಪಿಯಲ್ಲಿ ಸಂಭ್ರಮ ಮನೆಮಾಡಿದ್ದು, ದೆಹಲಿಯ ರಾಜಕೀಯ ಸಮೀಕರಣದಲ್ಲಿ ಮಹತ್ವದ ಬದಲಾವಣೆ ತಂದುಕೊಟ್ಟಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು