Trending

ಕೇರಳ : ದೇಗುಲಗಳಿಗೆ ಪರಿಶಿಷ್ಟ ಸಮುದಾಯದ ಅರ್ಚಕರ ನೇಮಕ

ಕೇರಳದ ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ಸದ್ಯದಲ್ಲೇ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರು ಅರ್ಚಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಈ ಮೂಲಕ ಕೇರಳದ ದೇವಸ್ಥಾನಗಳಲ್ಲಿ ಪರಿಶಿಷ್ಟ ಸಮುದಾಯದವರಿಗೂ ಪೂಜೆ ನೆರವೇರಿಸುವುದಕ್ಕೆ ಅವಕಾಶ ದೊರೆತಂತಾಗುತ್ತದೆ. ಇದೊಂದು ಐತಿಹಾಸಿಕ ನಿರ್ಧಾರ ಎನ್ನಲಾಗಿದೆ.

ಟಿಡಿಬಿ ಸ್ವಾಯತ್ತ ದೇವಸ್ಥಾನ ಮಂಡಳಿಯಾಗಿದೆ. ಶಬರಿಮಲೆ ಅಯ್ಯಪ್ಪ ದೇಗುಲ ಸೇರಿದಂತೆ ರಾಜ್ಯದಲ್ಲಿ 1,200 ದೇಗುಲಗಳ ನಿರ್ವಹಣೆ ಮಾಡುತ್ತಿದೆ. ಈ ದೇಗುಲಗಳಲ್ಲಿ ಅರೆಕಾಲಿಕ ಅವಧಿಗೆ ಪರಿಶಿಷ್ಟ ಜಾತಿಗೆ ಸೇರಿದ 18 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದಂತೆ ಒಬ್ಬರನ್ನು ಮಂಡಳಿ ಅರ್ಚಕರನ್ನಾಗಿ ನಿಯೋಜಿಸಲಿದೆ.

ಈ ವಿಚಾರವನ್ನು ಕೇರಳ ದೇವಸ್ವಂ ಸಚಿವ ಕಡಕಂಪಳ್ಳಿ ಸುರೇಂದ್ರನ್‌ ಅವರೂ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಿಶೇಷ ನೇಮಕಾತಿಯಡಿಯಲ್ಲಿ ಪರಿಶಿಷ್ಟ ಸಮುದಾಯದವರು ಅರೆಕಾಲಿಕ ಅರ್ಚಕರಾಗಿ ದೇವಸ್ಥಾನಗಳಿಗೆ ನೇಮಕವಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

2017ರಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿ ಪ್ರಕಟಿಸಿದ ರ‍್ಯಾಂಕ್ ಪಟ್ಟಿಯಲ್ಲಿ 310 ಜನರು ಅರೆಕಾಲಿಕ ಅರ್ಚಕರ ಹುದ್ದೆಗೆ ಆಯ್ಕೆಯಾಗಿದ್ದರು. ಆದರೆ ಅದರಲ್ಲಿ ಎಸ್‌.ಸಿ ಮತ್ತು ಎಸ್‌.ಟಿ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳು ಇರಲಿಲ್ಲ. ಬಳಿಕ ವಿಶೇಷ ಅಧಿಸೂಚನೆ ಹೊರಡಿಸಲಾಯಿತು.

ಎಸ್‌.ಟಿ ಸಮುದಾಯದವರಿಗೆ  4 ಹುದ್ದೆಗಳು ಖಾಲಿ ಇದ್ದರೂ ಕೇವಲ ಒಂದು ಅರ್ಜಿ ಸಲ್ಲಿಕೆಯಾಗಿತ್ತು ಎಂದು ಹೇಳಿದ್ದಾರೆ.

ಎಡಪಂಥೀಯ ವಿಚಾರಧಾರೆ ಹೊಂದಿರುವ ಪಕ್ಷವು ಅಧಿಕಾರಕ್ಕೆ ಬಂದ ಬಳಿಕ ನೇಮಕಾತಿ ಮಂಡಳಿಯನ್ನು ಪುನರ್‌ರಚಿಸಲಾಯಿತು. ಆಗ ತಿರುವಾಂಕೂರು, ಕೊಚ್ಚಿ, ಮಲಬಾರ್‌ ದೇವಸ್ವಂ ಬೋರ್ಡ್‌ಗಳಿಗೆ 815 ಮಂದಿ ಆಯ್ಕೆಯಾಗಿದ್ದರು. ಸದ್ಯ ಅಧಿಕಾರದಲ್ಲಿರುವ ಸರ್ಕಾರದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ಒಟ್ಟು 133 ಬ್ರಾಹ್ಮಣೇತರ ಅರ್ಚಕರನ್ನು ನೇಮಕ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024