ರಾಷ್ಟ್ರೀಯ

ಇಮ್ರಾನ್ ವಿರುದ್ದ ಅವಿಶ್ವಾಸ ಮಂಡಿಸಲು ಸುಪ್ರೀಂ ಅಸ್ತು – ಶನಿವಾರ ಖಾನ್ ಭವಿಷ್ಯ ನಿರ್ಧಾರ

ಪಾಕ್ ಪ್ರಧಾನಿ ಇಮ್ರಾನ್ ಖಾನ್​ಗೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಹಿನ್ನಡೆಯಾಗಿದೆ. ಶನಿವಾರ ಇಮ್ರಾನ್ ಖಾನ್ ವಿರುದ್ದ ಅವಿಶ್ವಾಸ ಮತ ಯಾಚನೆ ಮಾಡಲು ಕೋರ್ಟ್ ಅದೇಶ ಮಾಡಿದೆ.

ಡೆಪ್ಯೂಟಿ ಸ್ಪೀಕರ್ ಅವಿಶ್ವಾಸ ಗೊತ್ತುವಳಿ ನಿರ್ಣಯದ ಪ್ರಸ್ತಾಪವನ್ನು ವಜಾ ಮಾಡಿರುವುದು ಅಸಂವಿಧಾನಿಕ ಎಂದು ಪಾಕಿಸ್ತಾನ್​ ಸುಪ್ರೀಂಕೋರ್ಟ್​ ಆದೇಶ ನೀಡಿದೆ.

ಏಪ್ರಿಲ್ 3 ರಂದು ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ಗೊತ್ತುವಳಿಯನ್ನು ಸಂಸತ್​​ನಲ್ಲಿ ಮಂಡಿಸಿದ್ದರು. ಆದರೆ ಅಲ್ಲಿನ ಡೆಪ್ಯೂಟಿ ಸ್ಪೀಕರ್​ ಅದನ್ನು ವಜಾ ಮಾಡಿ ಆದೇಶ ನೀಡಿದ್ದರು. ಡೆಪ್ಯೂಟಿ ಸ್ಪೀಕರ್ ನಿರ್ಧಾರವನ್ನು ಪ್ರಶ್ನಿಸಿ, ಇಮ್ರಾನ್ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದವು.

ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ಪಾಕ್ ಸುಪ್ರೀಂ ಕೋರ್ಟ್​ನ ಪಂಚಪೀಠ, ಇಂದು ಐತಿಹಾಸಿಕ ತೀರ್ಪನ್ನ ಘೋಷಣೆ ಮಾಡಿದೆ. ಸ್ಪೀಕರ್ ನೀಡಿರುವ ಆದೇಶ ಸಂವಿಧಾನ ಬಾಹೀರ ಎಂದಿದೆ.

ಏಪ್ರಿಲ್ 9 ರಂದು ಮತ್ತೆ ವಿರೋಧ ಪಕ್ಷಗಳಿಗೆ ಅವಿಶ್ವಾಸ ನಿರ್ಣಯ ಗೊತ್ತುವಳಿಯನ್ನು ಮಂಡಿಸಲು ಸೂಚನೆ ನೀಡಿದೆ. ಅದರಂತೆ ಏಪ್ರಿಲ್ 9 ರಂದು ಇಮ್ರಾನ್ ಖಾನ್ ಭವಿಷ್ಯ ನಿರ್ಧಾರವಾಗಲಿದೆ.

Team Newsnap
Leave a Comment
Share
Published by
Team Newsnap

Recent Posts

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024