Karnataka

ಕಿಕ್​ ಬಾಕ್ಸಿಂಗ್​ ಸ್ಪರ್ಧೆ: ತಲೆಗೆ ಬಿದ್ದ ಪೆಟ್ಟಿನಿಂದ ಮೈಸೂರಿನ ಯುವಕ ಸಾವು

ಬೆಂಗಳೂರಿನ ಕೆಂಗೇರಿಯಲ್ಲಿ ಜುಲೈ 10 ರಂದು ನಡೆದ ಕಿಕ್ ಬಾಕ್ಸಿಂಗ್​ ಸ್ಪರ್ಧೆಯಲ್ಲಿ ಗಂಭೀರವಾಗಿ ಪಾಲ್ಗೊಂಡಿದ್ದ ಮೈಸೂರಿನ ಯುವಕ‌ ದುರಂತ ಸಾವು ಕಂಡಿದ್ದಾನೆ

ನಿಖಿಲ್ (24) ಮೃತ ದುರ್ದೈವಿ. ಬೆಂಗಳೂರಿನ ಕೆಂಗೇರಿಯಲ್ಲಿ K 1 ಕಿಕ್ ಬಾಕ್ಸರ್ ಆರ್ಗನೈಸೇಷನ್ ವತಿಯಿಂದ ಕಿಕ್ ಬಾಕ್ಸಿಂಗ್​ ಸ್ಪರ್ಧೆ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ನಿಖಿಲ್​ ಪಾಲ್ಗೊಂಡಿದ್ದರು.ಇದನ್ನು ಓದಿ –ಮಳವಳ್ಳಿ ಬಳಿ ಭೀಕರ ರಸ್ತೆ ಅಪಘಾತ : ಆಟೋಗೆ ಕಾರ್ ಡಿಕ್ಕಿ – ಮೂವರು ಧಾರುಣ ಸಾವು

ಕಿಕ್ ಬಾಕ್ಸಿಂಗ್​ನ ರಿಂಗ್‌ನಲ್ಲಿ ಸೆಣಸಾಡುತ್ತಿರುವಾಗ ಎದುರಾಳಿಯು ನಿಖಿಲ್​ ತಲೆಗೆ ಹೊಡೆದ ಏಟಿಗೆ ಬಾಕ್ಸಿಂಗ್ ರಿಂಗ್​ನಲ್ಲೇ ನಿಖಿಲ್​ ಕೆಳಗೆ ಬಿದ್ದವರು ಮೇಲಕ್ಕೆ ಏಳಲೇ ಇಲ್ಲ. ಕೂಡಲೇ ಅವರನ್ನು ಬೆಂಗಳೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಎರಡು ದಿನ ಕೋಮಾದಲ್ಲಿದ್ದ ನಿಖಿಲ್, ಚಿಕಿತ್ಸೆ ಫಲಿಸದೆ ಬುಧವಾರ ಕೊನೆಯುಸಿರೆಳೆದರು.

ನಿಖಿಲ್ ತಂದೆ ಬಾಕ್ಸರ್ ಆಗಿದ್ದರು. ಕಿಕ್ ಬಾಕ್ಸಿಂಗ್​ನಲ್ಲಿ ಹೆಸರು ಮಾಡಬೇಕೆಂದು ನಿಖಿಲ್​ ಕನಸು ಕಂಡಿದ್ದ. ಆದರೆ, ವಿಧಿಯಾಟದ ಮುಂದೆ ನಿಖಿಲ್​ರ ಜೀವವೇ ಕರಗಿದೆ.

ಕಿಕ್ ಬಾಕ್ಸಿಂಗ್​ನ ರಿಂಗ್​ನಲ್ಲಿ ನಿಖಿಲ್ ಕೆಳಗೆ ಬೀಳುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ, ನಿಖಿಲ್​ರ ಬದುಕಿನ ಕೊನೇ ಕ್ಷಣ ನೋಡಿ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

Team Newsnap
Leave a Comment

Recent Posts

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024