Uncategorized

ಖಾತೆ ತೆರೆದ ಕೋಲ್ಕತ್ತಾ – SRH ವಿರುದ್ದ 7 ವಿಕೆಟ್ ಗೆಲವು

ದುಬೈನ ಅಬು ಹವ ಶೇಕ್ ಜಯೇದ್ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಐಪಿಎಲ್ 20-2ರ 8 ನೇ ದಿನದ ಮ್ಯಾಚ್ ನಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಮೊದಲ ಬಾರಿಗೆ ಗೆಲುವು ಸಾಧಿಸಿದೆ. ಈ ಮೂಲಕ ಕೋಲ್ಕತ್ತ ನೈಟ್ ರೈಡರ್ಸ್ ತಂಡ ತನ್ನ ಗೆಲುವಿನ ಖಾತೆ ಆರಂಭಿಸಿದಂತಾಗಿದೆ.

ಸನ್ ರೈಸರ್ಸ್ ಆಫ್ ಹೈದರಾಬಾದ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಸನ್ ರೈಸರ್ಸ್ ಆಫ್ ಹೈದರಾಬಾದ್ ಎರಡನೇ ಬಾರಿಯೂ ಸೋಲನ್ನು ಅನುಭವಿಸಬೇಕಾಯ್ತು. ಸನ್ ರೈಸರ್ಸ್ ತಂಡದ ಆರಂಭಿಕ ಆಟಗಾರರಾಗಿ ಮೈದಾನಕ್ಕಿಳಿದ ನಾಯಕ ಡಿ. ವಾರ್ನರ್ ಹಾಗೂ ಉಪನಾಯಕ ಜೆ. ಬೇರ್ಸ್ಟೋವ್ ಅವರು ಉತ್ತಮ ಆಟ ಪ್ರಾರಂಭ ಮಾಡಿದರು. ಡಿ. ವಾರ್ನರ್ 30 ಎಸೆತಗಳಿಗೆ 36 ರನ್ ಗಳಿಸಿ ತಂಡ ಮೇಲೆತ್ತಲು ಪ್ರಯತ್ನಿಸಿದರು. ಆದರೆ ಜೆ. ಬೇರ್ಸ್ಟೋವ್ ಕೇವಲ 5 ರನ್ ಗಳಿಗೆ ಪೆವಿಲಿಯನ್ ಸೇರಿದಾಗ ರೈಸರ್ಸ್ ಅಭಿಮಾನಿಗಳಿಗೆ ನಿರಾಸೆಯಾಯ್ತು.

ಬೇರ್ಸ್ಟೋವ್ ನಂತರ ಬಂದ ಮನೀಶ್ ಪಾಂಡೆ 38 ಎಸೆತಗಾಳಲ್ಲಿ 51 ರನ್ ಮತ್ತು ಡಬ್ಲ್ಯೂ. ಸಹಾ 31 ಬಲ್ ಗಳಿಗೆ 30 ರನ್ ಗಳಿಸಿ ತಂಡಕ್ಕೆ ಆಸರೆಯಾದರಾದರೂ ತಂಡ ಗೆಲ್ಲಲಿಲ್ಲ ಮನೀಶ್ ಪಾಂಡೆಯವರ ಶ್ರಮ ಸಾರ್ಥಕವಾಗಲಿಲ್ಲ. ತಂಡವು 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 142 ರನ್ ಗಳಿಸಿತು.

ಹೈದರಾಬಾದ್ ತಂಡ ಕೊಟ್ಟ ಗುರಿಯನ್ನು ಬೆನ್ನತ್ತಿ ಹೊರಟ ಕೋಲ್ಕತ್ತ ಉತ್ತಮ ಪ್ರದರ್ಶನವನ್ನೇ ನೀಡಿತು. ಕೋಲ್ಕತ್ತ ತಂಡದ ಆರಂಭಿಕ ಆಟಗಾರರಾಗಿ ಶುಭಮನ್ ಗಿಲ್ ಅವರು ಕೋಲ್ಕತ್ತ ತಂಡಕ್ಕೆ ದೊಡ್ಡ ಮಟ್ಟದ ಆಸರೆಯಾದರು. 62 ಎಸೆತಗಳಲ್ಲಿ 70 ರನ್ ಗಳ ಬೃಹತ್ ಮೊತ್ತವನ್ನು ತಂಡಕ್ಕೆ ಕೊಟ್ಟರು. ಗಿಲ್ ನಂತರ ಬಂದ ಆಟಗಾರರಾದ ಎನ್. ರಾಣ (13 ಎಸೆತಗಳಿಗೆ 26 ರನ್) ಹಾಗೂ ಇ. ಮಾರ್ಗನ್ (29 ಎಸೆತಗಳಿಗೆ 42 ರನ್) ಗಳಿಸಿ ತಂಡವು ಐಪಿಎಲ್ ನ 13 ನೇ ಸರಣಿಯಲ್ಲಿ ಮೊದಲ್ ಬಾರಿಗೆ ಖಾತೆ ತೆರೆಯುವಲ್ಲಿ ಮಹತ್ವದ ಪಾತ್ರ ವಹಿಸಿದರು. 18 ಓವರ್ ಗಳಲ್ಲಿ ತಂಡ 3 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಿತು.

ಕೋಲ್ಕತ್ತ ತಂಡವು ಹೈದರಾಬಾದ್ ವಿರುದ್ಧ ಒಟ್ಟು 7 ವಿಕೆಟ್ ಗಳ ಭರ್ಜರಿ ಜಯವನ್ನು ಸಾಧಿಸಿತು.

Team Newsnap
Leave a Comment
Share
Published by
Team Newsnap

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024