Main News

ಕೊಡಗು – ಡಿಸಿ ವಾಸ್ತವ್ಯ ಹೂಡಿದ್ದ ಗ್ರಾಮದಲ್ಲೇ ಹುಲಿ ದಾಳಿ- ವಿದ್ಯಾರ್ಥಿ ಬಲಿ

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಬಳಿಯ ನಿನ್ನೆ ಜಿಲ್ಲಾಧಿಕಾರಿಗಳು ವಾಸ್ತವ ಹೂಡಿದ್ದ ಕುಮಟೂರು ಗ್ರಾಮದಲ್ಲಿ ಹುಲಿ ದಾಳಿಗೆ 14 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ.

ದಕ್ಷಿಣ ಕೊಡಗಿನಾದ್ಯಂತ ನಿರಂತರವಾಗಿ ಜಾನುವಾರುಗಳನ್ನು ಬಲಿ ಪಡೆಯುತ್ತಿದ್ದ ಹುಲಿ, ಇದೀಗ ನರಬಲಿ ಪಡೆದು ಕೊಂಡಂತಾಗಿದೆ.

ಕುಮಟೂರಿನ ಕೋಟ್ರಾಂಗಡ ಬಿದ್ದಪ್ಪ ತೋಟ ಕಾರ್ಮಿಕರಾಗಿರುವ ಪಣಿ ಎರವರ ಬಸವ ಅವರ ಪುತ್ರ ಅಯ್ಯಪ್ಪ ಎಂಬ ಬಾಲಕನೇ ಹುಲಿ ದಾಳಿಗೆ ಬಲಿಯಾಗಿದ್ದಾನೆ

ಶ್ರೀಮಂಗಲ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿಯಾಗಿರುವ ಅಯ್ಯಪ್ಪ, ಕೋಟ್ರಾಂಗಡ ಅಶ್ವತ್ ಎಂಬವರ ಕಾಫಿ ತೋಟದಲ್ಲಿ ಸೌದೆಗಾಗಿ ತೆರಳಿದ ಸಂದರ್ಭದಲ್ಲಿ ಸಂಜೆ ತೋಟದಲ್ಲಿ ಎದುರಾದ ಹುಲಿವೊಂದು ಬಾಲಕನ ಮೇಲೆರಗಿ ದಾಳಿ ನಡೆಸಿ, ಸ್ಥಳದಲ್ಲೇ ಕೊಂದು ಹಾಕಿರುವ ಎಲ್ಲಾ ಕುರುಹುಗಳು ಲಭ್ಯವಾಗಿದೆ.

ಹುಲಿ ದಾಳಿಯಿಂದಾಗಿ ಬಾಲಕನ ಮೆದುಳು ಹೊರಬಂದು ಸ್ಥಳದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಸ್ಥಿತಿಯಲ್ಲಿದೆ.

ಇದೇ ಗ್ರಾಮದಲ್ಲಿ ಜಿಲ್ಲಾಧಿಕಾರಿ ಶನಿವಾರ ಗ್ರಾಮ ವಾಸ್ತವ್ಯ ಹೂಡಿದ್ದ ವೇಳೆಯಲ್ಲಿ ಸ್ಥಳೀಯರು ಹುಲಿ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದರು.

ಸಭೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಸೆರೆ ಹಿಡಿಯುವ ಭರವಸೆ ನೀಡಿದ್ದರು. ಆದರೆ, ಶನಿವಾರ ಸಂಜೆಯೇ ಹುಲಿ ಬಾಲಕನನ್ನು ಬಲಿ ಪಡೆದುಕೊಂಡಿದೆ.

Team Newsnap
Leave a Comment
Share
Published by
Team Newsnap

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024