ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ.
ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿಯಲ್ಲಿ ರಾತ್ರಿಯಿಂದ ಬಿಡುವು ನೀಡಿದ್ದ ಮಳೆ, ಇಂದು ಬೆಳಿಗ್ಗೆ ಯಿಂದ ಬಿರುಸಾಗಿ ಸುರಿಯಲು ಆರಂಭಿಸಿದೆ.
ಮಡಿಕೇರಿ ತಾಲೂಕಿನ ನಾಪೋಕ್ಲು, ಭಾಗಮಂಡಲ, ತಲಕಾವೇರಿ ಭಾಗದಲ್ಲೂ ಭಾರಿ ಮಳೆಯಾಗುತ್ತಿದೆ. ಪರಿಣಾಮ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ. ಕಳೆದ ನಾಲ್ಕು ದಿನಗಳಿಂದ ತಾಲ್ಲೂಕಿನಾದ್ಯಂತ ಗಾಳಿ ಮಳೆಯಿಂದಾಗಿ, ಜನ ಜೀವನ ಅಸ್ತವ್ಯಸ್ತವಾಗಿದೆ.
ಈ ಭಾರಿ ಮಳೆಯಿಂದಾಗಿ ಕೊಡಗಿನ ಜಲಪಾತಗಳಿಗೆ ಸಾಕಷ್ಟು ನೀರು ಹರಿದು ಬರುತ್ತಿದೆ. ಜಲಪಾತಗಳಿಗೆ ಮತ್ತೆ ಜೀವಕಳೆ ಬಂದಿದೆ. ನಿರಂತರ ಮಳೆಯಿಂದ ಕೊಡಗಿನ ಹಾರಂಗಿ ಜಲಾಶಯಕ್ಕೆ 992 ಕ್ಯುಸೆಕ್ ಒಳಹರಿವು ಬರುತ್ತಿದೆ.


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ