ಕೋಲಾರ ಜಿಲ್ಲಾ ಶಸ್ತ್ರ ಚಿಕಿತ್ಸಕ, ಆರ್ ಎಂಓ ಅಮಾನತ್ತು – ಆರೋಗ್ಯ ಸಚಿವರ ಕ್ರಮ

Team Newsnap
1 Min Read
Siddu will not win in Kolar : Minister Sudhakarಸಿದ್ದು ಕೋಲಾರದಲ್ಲಿ ಗೆಲ್ಲುವುದಿಲ್ಲ - ಖೆಡ್ಡಾಗೆ ಬಿದ್ದಿದ್ದಾರೆ: ಸಚಿವ ಸುಧಾಕರ್‌

ಆ್ಯಕ್ಸಿಜನ್ ಕೊರತೆಯಿಂದ ನಾಲ್ವರು ಕೊರೋನಾ ಸೋಂಕಿತ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲಾ ಆಸ್ಪತ್ರೆ ಇಬ್ಬರು ಹಿರಿಯ ಅಧಿಕಾರಿಗಳನ್ನು ಅಮಾನತ್ತು ಗೊಳಿಸಲಾಗಿದೆ.

ಕಳೆದ ರಾತ್ರಿ ಕೋಲಾರಕ್ಕೆ ಭೇಟಿ ನಾಲ್ವರು ಕೊರೋನಾ ಸೋಂಕಿತರ ಸಾವಿನ ಬಗ್ಗೆ ಮಾಹಿತಿ ಪಡೆದುಕೊಂಡ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್, ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರ ‌ಚಿಕಿತ್ಸಕ‌ ಡಾ. ಎಸ್ ಜೆ ನಾರಾಯಣ ಹಾಗೂ ಆರ್ ಎಂ‌ ಓ ನಾರಾಯಣ ಸ್ವಾಮಿ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದರು.

ಈ ಘಟನೆ ನಡೆಯಬಾರದಿತ್ತು. ಈ ಘಟನೆ ಕುರಿತಂತೆ ಸಮಗ್ರ ತನಿಖೆ ನಡೆಸುವಂತೆ ಆದೇಶ ನೀಡಿದ್ದೇನೆ. ಲೋಪ ಪತ್ತೆ ಹಚ್ಚಿ ತಪ್ಪಿತಸ್ಥ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

Share This Article
Leave a comment