ಕೋಲಾರ ಜಿಲ್ಲೆಯಲ್ಲಿ ಅಕ್ಕ-ತಂಗಿಯನ್ನು ಮದುವೆಯಾಗಿದ್ದ ಉಮಾಪತಿ ವಿರುದ್ಧ ಈಗ ದೂರು ದಾಖಲಾಗಿದೆ. ಪೊಲೀಸರು ವರನನ್ನು ಬಂಧಿಸಿದ್ದಾರೆ.
ಮೇ.07 ರಂದು ಜಿಲ್ಲೆಯ ಉಮಾಪತಿ ಎಂಬಾತ ಅಕ್ಕ-ತಂಗಿಯನ್ನು ಒಂದೇ ಮಂಟಪದಲ್ಲಿ ಮದುವೆಯಾಗಿದ್ದ.
ಇಬ್ಬರನ್ನು ಒಂದೇ ಮಂಟಪದಲ್ಲಿ ಮದುವೆಯಾದ ಉಮಾಪತಿ, ವಧುವಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು.
ಫೋಟೋ ಹೆಚ್ಚು ವೈರಲ್ ಆದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಘಟನೆಯ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದರು.
ಬಂಧನಕ್ಕೆ ಕಾರಣ ಏನು ?
ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ವಿಚಾರಣೆ ನಡೆಸಿದ ಪೊಲೀಸರು, ಇಬ್ಬರು ಸಹೋದರಿಯರಲ್ಲಿ ತಂಗಿಗೆ ಇನ್ನು ಅಪ್ರಾಪ್ತ ವಯಸ್ಸು.
ಈ ಕಾರಣಕ್ಕಾಗಿ ಪೊಲೀಸರು ವರ ಉಮಾಪತಿ ಸೇರಿದಂತೆ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದ್ದಾರೆ.
ಮನೆಯ ಹೆಣ್ಣು ಮಕ್ಕಳಿಬ್ಬರನ್ನು ಮದುವೆಯಾಗಬೇಕು ಎಂಬ ವಧುವಿನ ತಂದೆ ಬೇಡಿಕೆ ಇಟ್ಟ ಕಾರಣಕ್ಕೆ ವರ ಮದುವೆಗೆ ಒಪ್ಪಿಗೆ ಸೂಚಿಸಿದ್ದ ಎನ್ನಲಾಗಿದೆ. ಮದುವೆಯಾಗಿ ಉಮಾಪತಿ ಜೈಲು ಸೇರಿದ. ವಿಚಾರಣೆ ನಡೆದಿದೆ.
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ