ಕೆಪಿಸಿಸಿ ಕಾರ್ಮಿಕ ವಿಭಾಗ:ರಾಜ್ಯ ಕಾರ್ಯದರ್ಶಿಯಾಗಿ ಅರುಣಕುಮಾರ್ ನೇಮಕ

Team Newsnap
1 Min Read

ಬೆಂಗಳೂರು :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗ ರಾಜ್ಯ ಕಾರ್ಯದರ್ಶಿ ಅರುಣ ಕುಮಾರ್ ರವರನ್ನು ನೇಮಕ ಮಾಡಿ ಅದೇಶ ಪತ್ರವನ್ನು ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾದ ಕೆ.ಪುಟ್ಚಸ್ವಾಮಿಗೌಡರವರು ನೀಡಿದರು.

ಈ ವೇಳೆ ಮಾತನಾಡಿದ ಅರುಣ ಕುಮಾರ್ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಮತ್ತು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ.ಸಂಗಮೇಶ್ವರ ರವರ ಮಾರ್ಗದರ್ಶನದಲ್ಲಿ ನಾನು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದೇನೆ.

ನನಗೆ ಕಾರ್ಮಿಕ ವಿಭಾಗದಲ್ಲಿ ರಾಜ್ಯ ಕಾರ್ಯದರ್ಶಿಯಾಗಿ ಸಂಘಟನೆ ಮಾಡು ಎಂದು ಪ್ರೋತ್ಸಹ, ಬೆಂಬಲ ನೀಡಿರುತ್ತಾರೆ.

ರಾಜ್ಯದಲ್ಲಿ ಮೂರು ಕೋಟಿಗಿಂತ ಹೆಚ್ಚು ಕಾರ್ಮಿಕ ವರ್ಗದ ಜನರು ಇದ್ದಾರೆ .ಅವರನ್ನು ಗುರುತಿಸಿ, ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ನೋಂದಾವಣೆ ಮಾಡಿ, ಕಾರ್ಮಿಕ ಇಲಾಖೆ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಕಾರ್ಮಿಕ ವರ್ಗದ ಕುಟುಂಬದವರಿಗೆ ತಲುಪಿಸುವಂತೆ ಮಾಡುತ್ತೇನೆ ಎಂದರು.ಬೆಂ -ಮೈ ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲುವಂತೆ ಶ್ರಮಿಸಲಾಗುವುದು ಎಂದು ಹೇಳಿದರು.

Share This Article
Leave a comment