ಈಜಲು ಹೋಗಿದ್ದ ಮೈಸೂರಿನ ಮೂವರು ಯುವಕರು ಜಲ ಸಮಾಧಿಯಾದ ಘಟನೆ
ಕೆ.ಆರ್.ಪೇಟೆ ತಾಲೂಕಿನ ನಾಟನಹಳ್ಳಿ ಬಳಿ ಹೇಮಾವತಿ ಜಲಾಶಯದ ಮಂದಗೆರೆ ಎಡದಂಡೆ ನಾಲೆಯಲ್ಲಿ ಕಳೆದ ಸಂಜೆ ಜರುಗಿದೆ.
ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಗ್ರಾಮದ ಸಮೀಪದಲ್ಲಿರುವ ಶಕ್ತಿದೇವತೆ ಶ್ರೀ ಚಂದಗೋಳಮ್ಮನವರ ಕ್ಷೇತ್ರಕ್ಕೆ ಪರುವಿಗೆ ಬಂದಿದ್ದ 8 ಯುವಕರ ಪೈಕಿ ಮೂವರು ಯುವಕರು ಮಂದಗೆರೆ ಎಡದಂಡೆ ನಾಲೆಯಲ್ಲಿ ಈಜಲು ಹೋಗಿ ಜಲಸಮಾಧಿಯಾಗಿದ್ದಾರೆ.
ಶವಗಳ ಪತ್ತೆಗೆ ಅಗ್ನಿಶಾಮಕ ಸಿಬ್ಬಂಧಿಗಳ ನೇತೃತ್ವದಲ್ಲಿ ನಡೆದ ಶೋಧಕಾರ್ಯ ನಿನ್ನೆ ರಾತ್ರಿ ಹಾಗೂ ಈ ಬೆಳಿಗ್ಗೆಯೂ ನಡೆದಿದೆ.
ಮೈಸೂರಿನ ಕುಂಬಾರಕೊಪ್ಪಲಿನ ಸಿದ್ಧರಾಜು ಪುತ್ರ ಮಂಜು(20), ಆಟೋ ಚಾಲಕ ಮೊಗರಹಳ್ಳಿ ಮಂಟಿಯ ನಿವಾಸಿ ರವಿ(27) ಮತ್ತು ಲೋಕನಾಯಕ ನಗರದ ರವಿ(22) ಸಾವನ್ನಪ್ಪಿದವರು.
ಮೃತದೇಹಗಳ ಪತ್ತೆಗೆ ಸಹಾಯಕವಾಗಲೆಂದು ನಾಲೆಯಲ್ಲಿ ನೀರು ಹರಿಯುವುದನ್ನು ಬಂದ್ ಮಾಡಲಾಗಿದೆ ಎಂದು ಗ್ರಾಮಾಂತರ ಠಾಣೆಯ ಸಬ್ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.
ಮೃತ ಯುವಕರ ಬಂಧುಗಳ ಆಕ್ರಂದನವು ಮುಗಿಲು ಮುಟ್ಟಿದೆ..
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ